Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...