Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...