Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...