Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...