Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...