Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...