Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...