Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...