Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...