Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...