Homeಕ್ರೀಡೆಒಲಂಪಿಕ್ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

- Advertisement -
- Advertisement -

ಟೊಕಿಯೋ ಒಲಿಂಪಿಕ್‌ನ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ಅವರ ವಿರುದ್ದ 18-12, 12-21 ಅಂತರದಲ್ಲಿ ಸೋತಿದ್ದಾರೆ. ಈ ಮೂಲಕ ಫೈನಲ್‌ ತಲುಪುವ ಅವರ ಕನಸು ಭಗ್ನಗೊಂಡಿದೆ.

ಕಂಚಿನ ಪದಕಕ್ಕಾಗಿ ಪಿವಿ ಸಿಂಧು ಭಾನುವಾರ ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ ಸೆಣಸಲಿದ್ದಾರೆ. ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಅವರು ಬೆಳ್ಳಿ ಪದಕ ಗೆದ್ದಿದ್ದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದರು.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಪಿವಿ ಸಿಂಧು ಸತತ ಎರಡು ಒಲಿಪಿಂಕ್‌ಗಳಲ್ಲಿ ಸೆಮಿಫೈನಲ್‌ಗೆ ಏರಿದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದಾರೆ. ಪಿವಿ ಸಿಂಧು ಮತ್ತು ಥಾಯಿ ತ್ಸು ಯಿಂಗ್‌‌ ಇದುವರೆಗೂ ಒಟ್ಟು 21 ಆಟಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಿವಿ ಸಿಂಧು 7 ಆಟಗಳಲ್ಲಿ ಮಾತ್ರವೆ ಜಯಗಳಿಸಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...