Homeಕ್ರೀಡೆಒಲಂಪಿಕ್ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

- Advertisement -
- Advertisement -

ಟೊಕಿಯೋ ಒಲಿಂಪಿಕ್‌ನ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ಅವರ ವಿರುದ್ದ 18-12, 12-21 ಅಂತರದಲ್ಲಿ ಸೋತಿದ್ದಾರೆ. ಈ ಮೂಲಕ ಫೈನಲ್‌ ತಲುಪುವ ಅವರ ಕನಸು ಭಗ್ನಗೊಂಡಿದೆ.

ಕಂಚಿನ ಪದಕಕ್ಕಾಗಿ ಪಿವಿ ಸಿಂಧು ಭಾನುವಾರ ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ ಸೆಣಸಲಿದ್ದಾರೆ. ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಅವರು ಬೆಳ್ಳಿ ಪದಕ ಗೆದ್ದಿದ್ದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದರು.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಪಿವಿ ಸಿಂಧು ಸತತ ಎರಡು ಒಲಿಪಿಂಕ್‌ಗಳಲ್ಲಿ ಸೆಮಿಫೈನಲ್‌ಗೆ ಏರಿದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದಾರೆ. ಪಿವಿ ಸಿಂಧು ಮತ್ತು ಥಾಯಿ ತ್ಸು ಯಿಂಗ್‌‌ ಇದುವರೆಗೂ ಒಟ್ಟು 21 ಆಟಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಿವಿ ಸಿಂಧು 7 ಆಟಗಳಲ್ಲಿ ಮಾತ್ರವೆ ಜಯಗಳಿಸಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...