Homeಕ್ರೀಡೆಒಲಂಪಿಕ್ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

- Advertisement -
- Advertisement -

ಟೊಕಿಯೋ ಒಲಿಂಪಿಕ್‌ನ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ಅವರ ವಿರುದ್ದ 18-12, 12-21 ಅಂತರದಲ್ಲಿ ಸೋತಿದ್ದಾರೆ. ಈ ಮೂಲಕ ಫೈನಲ್‌ ತಲುಪುವ ಅವರ ಕನಸು ಭಗ್ನಗೊಂಡಿದೆ.

ಕಂಚಿನ ಪದಕಕ್ಕಾಗಿ ಪಿವಿ ಸಿಂಧು ಭಾನುವಾರ ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ ಸೆಣಸಲಿದ್ದಾರೆ. ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಅವರು ಬೆಳ್ಳಿ ಪದಕ ಗೆದ್ದಿದ್ದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದರು.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಪಿವಿ ಸಿಂಧು ಸತತ ಎರಡು ಒಲಿಪಿಂಕ್‌ಗಳಲ್ಲಿ ಸೆಮಿಫೈನಲ್‌ಗೆ ಏರಿದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದಾರೆ. ಪಿವಿ ಸಿಂಧು ಮತ್ತು ಥಾಯಿ ತ್ಸು ಯಿಂಗ್‌‌ ಇದುವರೆಗೂ ಒಟ್ಟು 21 ಆಟಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಿವಿ ಸಿಂಧು 7 ಆಟಗಳಲ್ಲಿ ಮಾತ್ರವೆ ಜಯಗಳಿಸಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...