Homeಕ್ರೀಡೆಒಲಂಪಿಕ್ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

- Advertisement -
- Advertisement -

ಟೊಕಿಯೋ ಒಲಿಂಪಿಕ್‌ನ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ಅವರ ವಿರುದ್ದ 18-12, 12-21 ಅಂತರದಲ್ಲಿ ಸೋತಿದ್ದಾರೆ. ಈ ಮೂಲಕ ಫೈನಲ್‌ ತಲುಪುವ ಅವರ ಕನಸು ಭಗ್ನಗೊಂಡಿದೆ.

ಕಂಚಿನ ಪದಕಕ್ಕಾಗಿ ಪಿವಿ ಸಿಂಧು ಭಾನುವಾರ ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ ಸೆಣಸಲಿದ್ದಾರೆ. ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಅವರು ಬೆಳ್ಳಿ ಪದಕ ಗೆದ್ದಿದ್ದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದರು.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಪಿವಿ ಸಿಂಧು ಸತತ ಎರಡು ಒಲಿಪಿಂಕ್‌ಗಳಲ್ಲಿ ಸೆಮಿಫೈನಲ್‌ಗೆ ಏರಿದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದಾರೆ. ಪಿವಿ ಸಿಂಧು ಮತ್ತು ಥಾಯಿ ತ್ಸು ಯಿಂಗ್‌‌ ಇದುವರೆಗೂ ಒಟ್ಟು 21 ಆಟಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಿವಿ ಸಿಂಧು 7 ಆಟಗಳಲ್ಲಿ ಮಾತ್ರವೆ ಜಯಗಳಿಸಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಇದನ್ನೂ ಓದಿ: ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...