Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...