Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...