Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...