Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...