Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...