Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...