Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...