Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...