Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...