Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...