Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...