Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...