Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....