Homeಕ್ರೀಡೆಒಲಂಪಿಕ್ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಸೋಮವಾರದಂದು ವಿಶ್ವದ ಎರಡನೆ ರ್‍ಯಾಂಕಿಂಗ್‌ನಲ್ಲಿರುವ ಆಸ್ಟ್ರೇಲಿಯಾವನ್ನು ಸೋಲಿಸಿ, ಒಲಿಂಪಿಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಮಿಫೈನಲ್‌ ತಲುಪಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿದೆ.

ಆಟದ 22 ನೇ ನಿಮಿಷದಲ್ಲಿ ಗುರ್‌ಜಿತ್‌ ಕೌರ್‌‌ ಹೊಡೆದ ಏಕೈಕ ಪೆನಾಲ್ಟಿ ಕಾರ್ನರ್ ಗೋಲ್‌ ಆಗುವುದರೊಂದಿಗೆ ಭಾರತೀಯ ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಒಲಿಂಪಿಕ್‌ನಲ್ಲಿ ಸೆಮಿಫೈನಲ್‌ಗೆ ತಲುಪಿಸಿತು. ಆಸ್ಟ್ರೇಲಿಯಾವು ಭಾರತದ ಮುಂದೆ ಸೂಲುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮೂರನೆ ಸ್ಥಾನಕ್ಕೆ ಇಳಿದಿದೆ. ರ್‍ಯಾಂಕಿಂಗ್‌ನಲ್ಲಿ ಒಂಬತ್ತನೆ ಸ್ಥಾನದಲ್ಲಿದ್ದ ಭಾರತವು ಏಳನೇ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಇದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಏಕೈಕ ಪೆನಾಲ್ಟಿ ಕಾರ್ನರ್ ಆಗಿತ್ತು. ಭಾರತವು ಐದು ಬಾರಿ ಗೋಲ್‌ಗೆ ಪ್ರಯತ್ನಿಸಿದ್ದರೆ, ಆಸ್ಟ್ರೇಲಿಯ ಆಟಗಾರರು 14 ಪ್ರಯತ್ನಗಳನ್ನು ದಾಖಲಿಸಿದ್ದಾರೆ. ಆದರೆ ಗುರ್ಜಿತ್‌ ಅವರ ಆಟವು ಭಾರತವನ್ನು ಗೆಲ್ಲಲು ಸಹಾಯ ಮಾಡಿತು. ಐತಿಹಾಸಿಕ ಗೋಲನ್ನು ಕೆಳಗೆ ವೀಕ್ಷಿಸಬಹುದಾಗಿದೆ.

ಭಾರತವು ಸೆಮಿಫೈನಲ್‌‌ನಲ್ಲಿ ವಿಶ್ವ ರ್‍ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕೇರಿರುವ ಅರ್ಜೈಂಟೀನಾವನ್ನು ಎದುರಿಸಲಿದೆ. ಪಂದ್ಯವು ಆಗಸ್ಟ್‌ 4 ರ ಬುಧವಾರ ನಡೆಯಲಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್ 

ಈ ಮಧ್ಯೆ ಭಾರತೀಯ ಪುರುಷರ ಹಾಕಿ ತಂಡವು ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಒಲಿಂಪಿಕ್ ಸೆಮಿಫೈನಲ್‌ಗೆ ತಲುಪಿದೆ. ತಂಡವು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಅನ್ನು 3-1 ಅಂತರದಿಂದ ಹಿಂದಿಕ್ಕಿತು. ದಿಲ್‌ಪ್ರೀತ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ಹಾರ್ದಿಕ್ ಸಿಂಗ್ ತಲಾ ಒಂದರಂತೆ ಒಟ್ಟು ಮೂರು ಫೀಲ್ಡ್ ಗೋಲುಗಳನ್ನು ಗಳಿಸಿದರು.

ಸೆಮಿಫೈನಲ್‌ನಲ್ಲಿ ಪುರುಷರ ತಂಡವು ವಿಶ್ವದ ಎರಡನೆ ಶ್ರೇಯಾಂಕದಲ್ಲಿರವ ಬೆಲ್ಜಿಯಂನ ವಿರುದ್ದ ಮಂಗಳವಾರ(ನಾಳೆ) ಬೆಳಿಗ್ಗೆ ಸೆಣಸಲಿದೆ. ಕ್ವಾರ್ಟರ್‌ ಪೈನಲ್‌ ತಲುಪುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಐದನೆ ಸ್ಥಾನದಲ್ಲಿದ್ದ ಭಾರತವು ವಿಶ್ವದ ಮೂರನೆ ಅಗ್ರ ಶ್ರೇಯಾಂಕಕ್ಕೆ ಏರಿದೆ.

ಟೊಕಿಯೋ ಒಲಿಂಪಿಕ್‌ನ ಮಹಿಳೆಯರ ಡಿಸ್ಕಸ್‌ ಎಸೆತದ ಫೈನಲ್‌‌ ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದ್ದು, ಇದರಲ್ಲಿ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಸ್ಥಾನಪಡೆದಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಕಮಲ್‌ಪ್ರೀತ್‌‌ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...