Homeಕ್ರೀಡೆಒಲಂಪಿಕ್ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಸೋಮವಾರದಂದು ವಿಶ್ವದ ಎರಡನೆ ರ್‍ಯಾಂಕಿಂಗ್‌ನಲ್ಲಿರುವ ಆಸ್ಟ್ರೇಲಿಯಾವನ್ನು ಸೋಲಿಸಿ, ಒಲಿಂಪಿಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಮಿಫೈನಲ್‌ ತಲುಪಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿದೆ.

ಆಟದ 22 ನೇ ನಿಮಿಷದಲ್ಲಿ ಗುರ್‌ಜಿತ್‌ ಕೌರ್‌‌ ಹೊಡೆದ ಏಕೈಕ ಪೆನಾಲ್ಟಿ ಕಾರ್ನರ್ ಗೋಲ್‌ ಆಗುವುದರೊಂದಿಗೆ ಭಾರತೀಯ ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಒಲಿಂಪಿಕ್‌ನಲ್ಲಿ ಸೆಮಿಫೈನಲ್‌ಗೆ ತಲುಪಿಸಿತು. ಆಸ್ಟ್ರೇಲಿಯಾವು ಭಾರತದ ಮುಂದೆ ಸೂಲುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮೂರನೆ ಸ್ಥಾನಕ್ಕೆ ಇಳಿದಿದೆ. ರ್‍ಯಾಂಕಿಂಗ್‌ನಲ್ಲಿ ಒಂಬತ್ತನೆ ಸ್ಥಾನದಲ್ಲಿದ್ದ ಭಾರತವು ಏಳನೇ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಇದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಏಕೈಕ ಪೆನಾಲ್ಟಿ ಕಾರ್ನರ್ ಆಗಿತ್ತು. ಭಾರತವು ಐದು ಬಾರಿ ಗೋಲ್‌ಗೆ ಪ್ರಯತ್ನಿಸಿದ್ದರೆ, ಆಸ್ಟ್ರೇಲಿಯ ಆಟಗಾರರು 14 ಪ್ರಯತ್ನಗಳನ್ನು ದಾಖಲಿಸಿದ್ದಾರೆ. ಆದರೆ ಗುರ್ಜಿತ್‌ ಅವರ ಆಟವು ಭಾರತವನ್ನು ಗೆಲ್ಲಲು ಸಹಾಯ ಮಾಡಿತು. ಐತಿಹಾಸಿಕ ಗೋಲನ್ನು ಕೆಳಗೆ ವೀಕ್ಷಿಸಬಹುದಾಗಿದೆ.

ಭಾರತವು ಸೆಮಿಫೈನಲ್‌‌ನಲ್ಲಿ ವಿಶ್ವ ರ್‍ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕೇರಿರುವ ಅರ್ಜೈಂಟೀನಾವನ್ನು ಎದುರಿಸಲಿದೆ. ಪಂದ್ಯವು ಆಗಸ್ಟ್‌ 4 ರ ಬುಧವಾರ ನಡೆಯಲಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್ 

ಈ ಮಧ್ಯೆ ಭಾರತೀಯ ಪುರುಷರ ಹಾಕಿ ತಂಡವು ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಒಲಿಂಪಿಕ್ ಸೆಮಿಫೈನಲ್‌ಗೆ ತಲುಪಿದೆ. ತಂಡವು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಅನ್ನು 3-1 ಅಂತರದಿಂದ ಹಿಂದಿಕ್ಕಿತು. ದಿಲ್‌ಪ್ರೀತ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ಹಾರ್ದಿಕ್ ಸಿಂಗ್ ತಲಾ ಒಂದರಂತೆ ಒಟ್ಟು ಮೂರು ಫೀಲ್ಡ್ ಗೋಲುಗಳನ್ನು ಗಳಿಸಿದರು.

ಸೆಮಿಫೈನಲ್‌ನಲ್ಲಿ ಪುರುಷರ ತಂಡವು ವಿಶ್ವದ ಎರಡನೆ ಶ್ರೇಯಾಂಕದಲ್ಲಿರವ ಬೆಲ್ಜಿಯಂನ ವಿರುದ್ದ ಮಂಗಳವಾರ(ನಾಳೆ) ಬೆಳಿಗ್ಗೆ ಸೆಣಸಲಿದೆ. ಕ್ವಾರ್ಟರ್‌ ಪೈನಲ್‌ ತಲುಪುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಐದನೆ ಸ್ಥಾನದಲ್ಲಿದ್ದ ಭಾರತವು ವಿಶ್ವದ ಮೂರನೆ ಅಗ್ರ ಶ್ರೇಯಾಂಕಕ್ಕೆ ಏರಿದೆ.

ಟೊಕಿಯೋ ಒಲಿಂಪಿಕ್‌ನ ಮಹಿಳೆಯರ ಡಿಸ್ಕಸ್‌ ಎಸೆತದ ಫೈನಲ್‌‌ ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದ್ದು, ಇದರಲ್ಲಿ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಸ್ಥಾನಪಡೆದಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಕಮಲ್‌ಪ್ರೀತ್‌‌ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...