Homeಕ್ರೀಡೆಒಲಂಪಿಕ್ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಸೋಮವಾರದಂದು ವಿಶ್ವದ ಎರಡನೆ ರ್‍ಯಾಂಕಿಂಗ್‌ನಲ್ಲಿರುವ ಆಸ್ಟ್ರೇಲಿಯಾವನ್ನು ಸೋಲಿಸಿ, ಒಲಿಂಪಿಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಮಿಫೈನಲ್‌ ತಲುಪಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿದೆ.

ಆಟದ 22 ನೇ ನಿಮಿಷದಲ್ಲಿ ಗುರ್‌ಜಿತ್‌ ಕೌರ್‌‌ ಹೊಡೆದ ಏಕೈಕ ಪೆನಾಲ್ಟಿ ಕಾರ್ನರ್ ಗೋಲ್‌ ಆಗುವುದರೊಂದಿಗೆ ಭಾರತೀಯ ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಒಲಿಂಪಿಕ್‌ನಲ್ಲಿ ಸೆಮಿಫೈನಲ್‌ಗೆ ತಲುಪಿಸಿತು. ಆಸ್ಟ್ರೇಲಿಯಾವು ಭಾರತದ ಮುಂದೆ ಸೂಲುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮೂರನೆ ಸ್ಥಾನಕ್ಕೆ ಇಳಿದಿದೆ. ರ್‍ಯಾಂಕಿಂಗ್‌ನಲ್ಲಿ ಒಂಬತ್ತನೆ ಸ್ಥಾನದಲ್ಲಿದ್ದ ಭಾರತವು ಏಳನೇ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಇದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಏಕೈಕ ಪೆನಾಲ್ಟಿ ಕಾರ್ನರ್ ಆಗಿತ್ತು. ಭಾರತವು ಐದು ಬಾರಿ ಗೋಲ್‌ಗೆ ಪ್ರಯತ್ನಿಸಿದ್ದರೆ, ಆಸ್ಟ್ರೇಲಿಯ ಆಟಗಾರರು 14 ಪ್ರಯತ್ನಗಳನ್ನು ದಾಖಲಿಸಿದ್ದಾರೆ. ಆದರೆ ಗುರ್ಜಿತ್‌ ಅವರ ಆಟವು ಭಾರತವನ್ನು ಗೆಲ್ಲಲು ಸಹಾಯ ಮಾಡಿತು. ಐತಿಹಾಸಿಕ ಗೋಲನ್ನು ಕೆಳಗೆ ವೀಕ್ಷಿಸಬಹುದಾಗಿದೆ.

ಭಾರತವು ಸೆಮಿಫೈನಲ್‌‌ನಲ್ಲಿ ವಿಶ್ವ ರ್‍ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕೇರಿರುವ ಅರ್ಜೈಂಟೀನಾವನ್ನು ಎದುರಿಸಲಿದೆ. ಪಂದ್ಯವು ಆಗಸ್ಟ್‌ 4 ರ ಬುಧವಾರ ನಡೆಯಲಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್ 

ಈ ಮಧ್ಯೆ ಭಾರತೀಯ ಪುರುಷರ ಹಾಕಿ ತಂಡವು ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಒಲಿಂಪಿಕ್ ಸೆಮಿಫೈನಲ್‌ಗೆ ತಲುಪಿದೆ. ತಂಡವು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಅನ್ನು 3-1 ಅಂತರದಿಂದ ಹಿಂದಿಕ್ಕಿತು. ದಿಲ್‌ಪ್ರೀತ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ಹಾರ್ದಿಕ್ ಸಿಂಗ್ ತಲಾ ಒಂದರಂತೆ ಒಟ್ಟು ಮೂರು ಫೀಲ್ಡ್ ಗೋಲುಗಳನ್ನು ಗಳಿಸಿದರು.

ಸೆಮಿಫೈನಲ್‌ನಲ್ಲಿ ಪುರುಷರ ತಂಡವು ವಿಶ್ವದ ಎರಡನೆ ಶ್ರೇಯಾಂಕದಲ್ಲಿರವ ಬೆಲ್ಜಿಯಂನ ವಿರುದ್ದ ಮಂಗಳವಾರ(ನಾಳೆ) ಬೆಳಿಗ್ಗೆ ಸೆಣಸಲಿದೆ. ಕ್ವಾರ್ಟರ್‌ ಪೈನಲ್‌ ತಲುಪುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಐದನೆ ಸ್ಥಾನದಲ್ಲಿದ್ದ ಭಾರತವು ವಿಶ್ವದ ಮೂರನೆ ಅಗ್ರ ಶ್ರೇಯಾಂಕಕ್ಕೆ ಏರಿದೆ.

ಟೊಕಿಯೋ ಒಲಿಂಪಿಕ್‌ನ ಮಹಿಳೆಯರ ಡಿಸ್ಕಸ್‌ ಎಸೆತದ ಫೈನಲ್‌‌ ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದ್ದು, ಇದರಲ್ಲಿ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಸ್ಥಾನಪಡೆದಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಕಮಲ್‌ಪ್ರೀತ್‌‌ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...