Homeಕ್ರೀಡೆಒಲಂಪಿಕ್ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

ಒಲಿಂಪಿಕ್ಸ್‌‌ | ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಸೆಮಿಗೆ ತಲುಪಿಸಿದ ಐತಿಹಾಸಿಕ ಗೋಲ್ ಇದು!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಸೋಮವಾರದಂದು ವಿಶ್ವದ ಎರಡನೆ ರ್‍ಯಾಂಕಿಂಗ್‌ನಲ್ಲಿರುವ ಆಸ್ಟ್ರೇಲಿಯಾವನ್ನು ಸೋಲಿಸಿ, ಒಲಿಂಪಿಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಮಿಫೈನಲ್‌ ತಲುಪಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿದೆ.

ಆಟದ 22 ನೇ ನಿಮಿಷದಲ್ಲಿ ಗುರ್‌ಜಿತ್‌ ಕೌರ್‌‌ ಹೊಡೆದ ಏಕೈಕ ಪೆನಾಲ್ಟಿ ಕಾರ್ನರ್ ಗೋಲ್‌ ಆಗುವುದರೊಂದಿಗೆ ಭಾರತೀಯ ಮಹಿಳಾ ಹಾಕಿ ತಂಡವನ್ನು ಮೊದಲ ಬಾರಿಗೆ ಒಲಿಂಪಿಕ್‌ನಲ್ಲಿ ಸೆಮಿಫೈನಲ್‌ಗೆ ತಲುಪಿಸಿತು. ಆಸ್ಟ್ರೇಲಿಯಾವು ಭಾರತದ ಮುಂದೆ ಸೂಲುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮೂರನೆ ಸ್ಥಾನಕ್ಕೆ ಇಳಿದಿದೆ. ರ್‍ಯಾಂಕಿಂಗ್‌ನಲ್ಲಿ ಒಂಬತ್ತನೆ ಸ್ಥಾನದಲ್ಲಿದ್ದ ಭಾರತವು ಏಳನೇ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಇದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಏಕೈಕ ಪೆನಾಲ್ಟಿ ಕಾರ್ನರ್ ಆಗಿತ್ತು. ಭಾರತವು ಐದು ಬಾರಿ ಗೋಲ್‌ಗೆ ಪ್ರಯತ್ನಿಸಿದ್ದರೆ, ಆಸ್ಟ್ರೇಲಿಯ ಆಟಗಾರರು 14 ಪ್ರಯತ್ನಗಳನ್ನು ದಾಖಲಿಸಿದ್ದಾರೆ. ಆದರೆ ಗುರ್ಜಿತ್‌ ಅವರ ಆಟವು ಭಾರತವನ್ನು ಗೆಲ್ಲಲು ಸಹಾಯ ಮಾಡಿತು. ಐತಿಹಾಸಿಕ ಗೋಲನ್ನು ಕೆಳಗೆ ವೀಕ್ಷಿಸಬಹುದಾಗಿದೆ.

ಭಾರತವು ಸೆಮಿಫೈನಲ್‌‌ನಲ್ಲಿ ವಿಶ್ವ ರ್‍ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕೇರಿರುವ ಅರ್ಜೈಂಟೀನಾವನ್ನು ಎದುರಿಸಲಿದೆ. ಪಂದ್ಯವು ಆಗಸ್ಟ್‌ 4 ರ ಬುಧವಾರ ನಡೆಯಲಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್ 

ಈ ಮಧ್ಯೆ ಭಾರತೀಯ ಪುರುಷರ ಹಾಕಿ ತಂಡವು ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಒಲಿಂಪಿಕ್ ಸೆಮಿಫೈನಲ್‌ಗೆ ತಲುಪಿದೆ. ತಂಡವು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಅನ್ನು 3-1 ಅಂತರದಿಂದ ಹಿಂದಿಕ್ಕಿತು. ದಿಲ್‌ಪ್ರೀತ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ಹಾರ್ದಿಕ್ ಸಿಂಗ್ ತಲಾ ಒಂದರಂತೆ ಒಟ್ಟು ಮೂರು ಫೀಲ್ಡ್ ಗೋಲುಗಳನ್ನು ಗಳಿಸಿದರು.

ಸೆಮಿಫೈನಲ್‌ನಲ್ಲಿ ಪುರುಷರ ತಂಡವು ವಿಶ್ವದ ಎರಡನೆ ಶ್ರೇಯಾಂಕದಲ್ಲಿರವ ಬೆಲ್ಜಿಯಂನ ವಿರುದ್ದ ಮಂಗಳವಾರ(ನಾಳೆ) ಬೆಳಿಗ್ಗೆ ಸೆಣಸಲಿದೆ. ಕ್ವಾರ್ಟರ್‌ ಪೈನಲ್‌ ತಲುಪುವುದರೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಐದನೆ ಸ್ಥಾನದಲ್ಲಿದ್ದ ಭಾರತವು ವಿಶ್ವದ ಮೂರನೆ ಅಗ್ರ ಶ್ರೇಯಾಂಕಕ್ಕೆ ಏರಿದೆ.

ಟೊಕಿಯೋ ಒಲಿಂಪಿಕ್‌ನ ಮಹಿಳೆಯರ ಡಿಸ್ಕಸ್‌ ಎಸೆತದ ಫೈನಲ್‌‌ ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದ್ದು, ಇದರಲ್ಲಿ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಸ್ಥಾನಪಡೆದಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಕಮಲ್‌ಪ್ರೀತ್‌‌ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...