Homeಮುಖಪುಟ‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

- Advertisement -
- Advertisement -

ಸಂಘ ಪರಿವಾರದ ಗರ್ಭಗುಡಿಯ ಪೂಜಾರಿ-ಭಟ್ಟರನ್ನು ಮೆಚ್ಚಿಸುವ ಏಕೈಕ ಉದ್ದೇಶದೊಂದಿಗೆ ಕೆಲಸ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಸದ್ಯ ‘ಓಂ’ ಮಿನಿಸ್ಟರ್ ಮಾತ್ರ. ಪೊಲೀಸ್ ಇಲಾಖೆಯಲ್ಲಿ ಮೊದಲಿಂದಲೂ ಬೇರು ಬಿಟ್ಟಿರುವ ಕೆಲವು ಅಧಿಕಾರಿಗಳು ಇದೇ ಸುಸಂದರ್ಭ ಎಂದು ತಮ್ಮ ಹಳೆಯ ಖಾಕಿ ಚೆಡ್ಡಿಗಳನ್ನು ಇಸ್ತ್ರಿ ಮಾಡಿಕೊಂಡು ಧರಿಸುತ್ತಿವೆ. ಮೇಲುಗಡೆ ಇಲಾಖೆಯ ಖಾಕಿ ಪ್ಯಾಂಟು ಅಷ್ಟೇ.

ಇದೆಲ್ಲದರ ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಎ-ಎನ್‌ಪಿಆರ್ ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಲು ಸಂಘ ಪರಿವಾರ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಕಾಣಬಹುದು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿ ಸ್ವಂತ ವ್ಯಕ್ತಿತ್ವವನ್ನು ಬಲಿಕೊಡದೇ, ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದ ಬಸವರಾಜ ಬೊಮ್ಮಾಯಿ ಈಗ ಸಂಘ ಮತ್ತು ಇಲಾಖೆಯಲ್ಲಿರುವ ಕೆಲವು ಚೆಡ್ಡಿ ವೈರಸ್‌ಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಇವತ್ತು ಭಾನುವಾರ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡೇ ಒಂದು ಹೈಲೆವೆಲ್ ಮೀಟಿಂಗ್ ಕರೆದಿದ್ದಾರೆ ಬೊಮ್ಮಾಯಿ ಬಸು. ಹೀಗಾಗಿ ಅವರೀಗ, ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ‘ದೇಶದ್ರೋಹ’ – ಸೆಡಿಷನ್ ಕಾಯ್ದೆ ಎಂಬ ಜಂಗು ಹಿಡಿದ ಅಸ್ತ್ರದ ಮೊರೆ ಹೋಗಿದ್ದಾರೆ. ಈ ಎಲ್ಲ ಗದ್ದಲದಲ್ಲಿ ತನ್ನ ಸ್ವಂತಿಕೆ ಕಳೆದುಕೊಂಡ ಬೊಮ್ಮಾಯಿ, ಕೆಲವು ಅಂಧ ಭಕ್ತರು ಹಾಕುವ ತಲೆಬುಡವಿಲ್ಲದ ಪೋಸ್ಟ್‌ಗಳ ಸಾರಾಂಶವನ್ನು ಸದನದಲ್ಲೇ ಉದ್ಘರಿಸಿ ಹಾಸ್ಯಾಸ್ಪದರಾಗುತ್ತಿದ್ದಾರೆ.

ಮಂಗಳೂರು ಗಲಭೆಯ ಬಗ್ಗೆ ಸ್ಪಷ್ಟ ನಿಲುವಿಲ್ಲ, ಬಾಂಬ್ ಇಡಲು ಹೋದವನಿಗೆ ಸೆಡಿಷನ್ ಕಾಯ್ದೆ ಅನ್ವಯ ಆಗುವುದಿಲ್ಲ, ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕ್ತೀವಿ ಅಂದವರ ಪತ್ತೆಯಿಲ್ಲ, ಬೀದರ್ ಶಾಲೆಯ ಕೇಸಿನಲ್ಲಿ ಹೈಕೋರ್ಟ್ ಉಗಿದರೂ ಇನ್ನೂ ಬುದ್ಧಿ ಬಂದಿಲ್ಲ. ಸದನದಲ್ಲಿ ಕುಮಾರಸ್ವಾಮಿ ಸಿರಾಜ್ ಕವನ ಓದಿದಾಗ ಬಾಯಿ ಬಿಡಲಿಲ್ಲ. ಈಗ ಅಮೂಲ್ಯ ಎಂಬ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ!

ತಿರಬೋಕಿಯಂತೆ ಎಲ್ಲೆಲ್ಲೋ ತಿರುಗುತ್ತ ಮುಸ್ಲಿಮರ ವಿರುದ್ಧ ಅಸಹ್ಯಕರ ಪೋಸ್ಟ್ ಹಾಕುತ್ತಿರುವ ಮಧುಗಿರಿ ಮೋದಿ ಎಂಬುವನನ್ನು ಪತ್ತೆ ಮಾಡಲಾಗುತ್ತಿಲ್ಲ. ನಾಲಿಗೆ ಕತ್ತರಿಸ್ತೀವಿ, ಗೌರಿ ಜಾಗಕ್ಕೆ ಕಳಿಸುತ್ತೇವೆ ಎಂದು ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕುವವನ ವಿರುದ್ಧ ಪೊಲೀಸ್ ಕ್ರಮವಿಲ್ಲ. ಇದರ ಪರಿಣಾಮವೇ ಗೋಡ್ಸೆ ಆರಾಧಿಸಿದ ವಿಡಿಯೋ ವೈರಲ್ ಮಾಡುವ ಕೆಲವು ಪುಂಡರು, ಸಿಎಎ ವಿರೋಧ ಮಾಡುವವರನ್ನು ಮುಗಿಸ್ತೀವಿ ಎನ್ನುತ್ತಾರೆ, ಹೊಸಪೇಟೆಯಲ್ಲೊಬ್ಬ ಎನ್‌ಕೌಂಟರ್ ಮಾಡ್ತೀನಿ ಎಂದು ಬೊಗಳುತ್ತಾನೆ.

ವೆರ್ ಇಸ್ ಬೊಮ್ಮಾಯಿ? ಇದೆಲ್ಲದರ ತಾತ್ಪರ್ಯವಿಷ್ಟೇ, ‘ಓಂ’ ಮಿನಿಸ್ಟರ್ ಬೊಮ್ಮಾಯಿ ದೇಶದ್ರೋಹ ಕಾಯ್ದೆಯಷ್ಟೇ ಔಟ್‌ಡೇಟೆಡ್! ಬೊಮ್ಮಾಯಿ ಮತ್ತು ಈ ಕಾಯ್ದೆಯನ್ನು ಮಿಸ್‌ಯೂಸ್ ಮಾಡಲಾಗುತ್ತಿದೆ. ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

ದೇಶದ್ರೋಹವೆಂಬ ಸಮೂಹಸನ್ನಿ

ಈಗ ದೇಶದಲ್ಲಿ ನಿತ್ಯ ಒಂದಿಲ್ಲೊಂದು ಕಡೆ ದೇಶದ್ರೋಹ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ. ಈ ಒಂದೂವರೆ ತಿಂಗಳಲ್ಲಿ ಕರ್ನಾಟಕದಲ್ಲೇ ಐದು ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ವಿಚಿತ್ರವೆಂದರೆ ಈ ಎಲ್ಲ ಪ್ರಕರಣಗಳ ಆರೋಪಿತರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಚಳುವಳಿಯಲ್ಲಿ ಭಾಗಿಯಾದವರು ಅಥವಾ ತಮ್ಮ ನೆಲೆಯಲ್ಲಿ ಅದರ ವಿರುದ್ಧ ಧ್ವನಿ ಎತ್ತಿದವರು!

ಈ ದೇಶದ್ರೋಹದ ಸಮೂಹಸನ್ನಿ ಹೀಗೆ ಹರಡುವುದಕ್ಕೂ, ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧದ ಚಳುವಳಿಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಗಿ ನಿಲುವು ತಾಳಿರುವುದಕ್ಕೂ ಸಂಬಂಧವಿದೆ. ಹೀಗಾಗಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಮಾತಾಡಿದರೆ ಅಥವಾ ಕವನ ಬರೆದರೂ ದೇಶದ್ರೋಹದ ಪ್ರಕರಣ ದಾಖಲಾಗಿವೆ. ಫ್ರೀ ಕಾಶ್ಮೀರ್, ಅಸ್ಪೃಶ್ಯತಾ ಮುಕ್ತಿ ಎಂಬ ಭಿತ್ತಿಪತ್ರ ಹಿಡಿದವರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ. ಇದೆಲ್ಲಕ್ಕಿಂತ ಹೆಚ್ಚು ಸುದ್ದಿಯಾಗಿರುವುದು ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದಳು ಎಂಬುದು.

ದೇಶದ್ರೋಹ ಕಾನೂನು ಬ್ರಿಟಿಷ್ ಕಾಲದ ವಸಾಹತುಶಾಹಿ ಕಾನೂನು. ಪ್ರಜಾಪ್ರಭುತ್ವದಲ್ಲಿ ಅದು ಅಪ್ರಸ್ತುತ ಎಂದು ಸುಪ್ರೀಂಕೋರ್ಟ್, ಕನ್ನಯ್ಯ ಕುಮಾರ ಪ್ರಕರಣದಿಂದ ಇಲ್ಲಿವರೆಗೆ ಹಲವು ಸಲ ಹೇಳಿದೆ. ಸಂಸತ್ತು ಇಂತಹ ವಸಾಹತುಶಾಹಿ ಕಾನೂನುಗಳನ್ನೆಲ್ಲ ರದ್ದು ಮಾಡಬೇಕೆಂದು ಹಲವು ಸಲ ಸೂಚಿಸಿದೆ. ಆದರೆ ಯಾವ ಸರ್ಕಾರವೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಪ್ರಶ್ನೆ ಮಾಡುವುದು, ಟೀಕಿಸುವುದು, ಅಧಿಕಾರಸ್ಥರ ತಪ್ಪನ್ನು ಎತ್ತಿ ತೋರಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳು. ದೇಶದ್ರೋಹ ಕಾನೂನನ್ನು ಈಗಿನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಲ್ಲಿವರೆಗೆ, ಅದು ಭಯೋತ್ಪಾದಕರನ್ನು ಹೊರತುಪಡಿಸಿ ಬೇರೆಯವರ ಮೇಲೆ ಹೂಡಿದ ದೇಶದ್ರೋಹ ಪ್ರಕರಣಗಳಲ್ಲಿ ಒಬ್ಬರಿಗೂ ಶಿಕ್ಷೆ ಆಗಿಲ್ಲ.


ಇದನ್ನೂ ಓದಿ: ಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?


ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಬೀದರ್‌ನ ಶಾಲೆಯೊಂದರ ಮಕ್ಕಳ ನಾಟಕದ ಸಂಭಾಷಣೆ ಆಧರಿಸಿ ಶಾಲೆಯ ಶಿಕ್ಷಕಿ ಮತ್ತು ಪಾತ್ರಧಾರಿ ವಿದ್ಯಾರ್ಥಿನಿಯ ತಾಯಿಯನ್ನು 20 ದಿನ ಜೈಲಿಗೆ ದೂಡಿತ್ತು. ಅವರಿಗೆ ಜಾಮೀನು ನೀಡಿದ ಹೈಕೋರ್ಟ್, ಸರ್ಕಾರದ ಈ ಹುಚ್ಚು ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಫ್ರೀ ಕಾಶ್ಮೀರ್ ಭಿತ್ತಿಪತ್ರ ಹಿಡಿದ, ಸಿಎಎಎ ವಿರೋಧಿ ಕವನ ಬರೆದ ವ್ಯಕ್ತಿಗಳಿಗೆ ಕೋರ್ಟುಗಳು ಯಾವುದೇ ತಕರಾರು ಇಲ್ಲದೇ ಜಾಮೀನು ನೀಡಿವೆ.

ಈಗ ಅಮೂಲ್ಯ ಮುಂದೆ ಏನು ಹೇಳಲಿದ್ದಳು ಎಂಬುದರ ಬಗ್ಗೆ ಯೋಚಿಸದೇ ದೇಶದ್ರೋಹ ಕೇಸು ಹಾಕಲಾಗಿದೆ. ಈ ಪ್ರಕರಣದಲ್ಲೂ ಸರ್ಕಾರಕ್ಕೆ ಮುಖಭಂಗವಾಗುವ ಎಲ್ಲ ಲಕ್ಷಣಗಳಿವೆ. ಯಾವುದೋ ಒಂದು ದೇಶದ ಪರ ಜೈಕಾರ ಹಾಕಿದರೆ, ಭಾರತದ ವಿರುದ್ಧ ಎಂದರ್ಥವಲ್ಲ. ಅಷ್ಟಕ್ಕೂ ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿಲ್ಲ, ಘೋಷಿಸಲು ಬರುವುದೂ ಇಲ್ಲ. ನಿತ್ಯ ಆ ದೇಶದೊಂದಿಗೆ ಸಾವಿರಾರು ಕೋಟಿಗಳ ವಾಣಿಜ್ಯ ವ್ಯವಹಾರ ನಡೆಯುತ್ತಿದೆ.

ದೇಶದ ವಿರುದ್ಧ ಸಂಚು ರೂಪಿಸಿ, ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದರೆ ಮಾತ್ರ ಅದು ದೇಶದ್ರೋಹ ಆಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ನಮ್ಮ ಸರ್ಕಾರಗಳು ಅರ್ಥ ಮಾಡಿಕೊಂಡರಷ್ಟೇ ಈ ಸಮೂಹ ಸನ್ನಿಯಿಂದ ಹೊರಬರಬಹುದು. ಆದರೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ತಮ್ಮ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ದೇಶದ್ರೋಹ ಎನ್ನವುದು ತಾತ್ಕಾಲಿಕ ಅಸ್ತ್ರವಾಗಿರುವುದು ಇವತ್ತಿನ ದೊಡ್ಡ ದುರಂತ.

(ಲೇಖಕರು ಪತ್ರಕರ್ತರು, ಇದರಲ್ಲಿನ ಅಭಿಪ್ರಾಯಗಳು ಅವರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...