Homeಮುಖಪುಟ‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

- Advertisement -
- Advertisement -

ಸಂಘ ಪರಿವಾರದ ಗರ್ಭಗುಡಿಯ ಪೂಜಾರಿ-ಭಟ್ಟರನ್ನು ಮೆಚ್ಚಿಸುವ ಏಕೈಕ ಉದ್ದೇಶದೊಂದಿಗೆ ಕೆಲಸ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಸದ್ಯ ‘ಓಂ’ ಮಿನಿಸ್ಟರ್ ಮಾತ್ರ. ಪೊಲೀಸ್ ಇಲಾಖೆಯಲ್ಲಿ ಮೊದಲಿಂದಲೂ ಬೇರು ಬಿಟ್ಟಿರುವ ಕೆಲವು ಅಧಿಕಾರಿಗಳು ಇದೇ ಸುಸಂದರ್ಭ ಎಂದು ತಮ್ಮ ಹಳೆಯ ಖಾಕಿ ಚೆಡ್ಡಿಗಳನ್ನು ಇಸ್ತ್ರಿ ಮಾಡಿಕೊಂಡು ಧರಿಸುತ್ತಿವೆ. ಮೇಲುಗಡೆ ಇಲಾಖೆಯ ಖಾಕಿ ಪ್ಯಾಂಟು ಅಷ್ಟೇ.

ಇದೆಲ್ಲದರ ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಎ-ಎನ್‌ಪಿಆರ್ ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಲು ಸಂಘ ಪರಿವಾರ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಕಾಣಬಹುದು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿ ಸ್ವಂತ ವ್ಯಕ್ತಿತ್ವವನ್ನು ಬಲಿಕೊಡದೇ, ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದ ಬಸವರಾಜ ಬೊಮ್ಮಾಯಿ ಈಗ ಸಂಘ ಮತ್ತು ಇಲಾಖೆಯಲ್ಲಿರುವ ಕೆಲವು ಚೆಡ್ಡಿ ವೈರಸ್‌ಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಇವತ್ತು ಭಾನುವಾರ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡೇ ಒಂದು ಹೈಲೆವೆಲ್ ಮೀಟಿಂಗ್ ಕರೆದಿದ್ದಾರೆ ಬೊಮ್ಮಾಯಿ ಬಸು. ಹೀಗಾಗಿ ಅವರೀಗ, ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ‘ದೇಶದ್ರೋಹ’ – ಸೆಡಿಷನ್ ಕಾಯ್ದೆ ಎಂಬ ಜಂಗು ಹಿಡಿದ ಅಸ್ತ್ರದ ಮೊರೆ ಹೋಗಿದ್ದಾರೆ. ಈ ಎಲ್ಲ ಗದ್ದಲದಲ್ಲಿ ತನ್ನ ಸ್ವಂತಿಕೆ ಕಳೆದುಕೊಂಡ ಬೊಮ್ಮಾಯಿ, ಕೆಲವು ಅಂಧ ಭಕ್ತರು ಹಾಕುವ ತಲೆಬುಡವಿಲ್ಲದ ಪೋಸ್ಟ್‌ಗಳ ಸಾರಾಂಶವನ್ನು ಸದನದಲ್ಲೇ ಉದ್ಘರಿಸಿ ಹಾಸ್ಯಾಸ್ಪದರಾಗುತ್ತಿದ್ದಾರೆ.

ಮಂಗಳೂರು ಗಲಭೆಯ ಬಗ್ಗೆ ಸ್ಪಷ್ಟ ನಿಲುವಿಲ್ಲ, ಬಾಂಬ್ ಇಡಲು ಹೋದವನಿಗೆ ಸೆಡಿಷನ್ ಕಾಯ್ದೆ ಅನ್ವಯ ಆಗುವುದಿಲ್ಲ, ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕ್ತೀವಿ ಅಂದವರ ಪತ್ತೆಯಿಲ್ಲ, ಬೀದರ್ ಶಾಲೆಯ ಕೇಸಿನಲ್ಲಿ ಹೈಕೋರ್ಟ್ ಉಗಿದರೂ ಇನ್ನೂ ಬುದ್ಧಿ ಬಂದಿಲ್ಲ. ಸದನದಲ್ಲಿ ಕುಮಾರಸ್ವಾಮಿ ಸಿರಾಜ್ ಕವನ ಓದಿದಾಗ ಬಾಯಿ ಬಿಡಲಿಲ್ಲ. ಈಗ ಅಮೂಲ್ಯ ಎಂಬ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ!

ತಿರಬೋಕಿಯಂತೆ ಎಲ್ಲೆಲ್ಲೋ ತಿರುಗುತ್ತ ಮುಸ್ಲಿಮರ ವಿರುದ್ಧ ಅಸಹ್ಯಕರ ಪೋಸ್ಟ್ ಹಾಕುತ್ತಿರುವ ಮಧುಗಿರಿ ಮೋದಿ ಎಂಬುವನನ್ನು ಪತ್ತೆ ಮಾಡಲಾಗುತ್ತಿಲ್ಲ. ನಾಲಿಗೆ ಕತ್ತರಿಸ್ತೀವಿ, ಗೌರಿ ಜಾಗಕ್ಕೆ ಕಳಿಸುತ್ತೇವೆ ಎಂದು ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕುವವನ ವಿರುದ್ಧ ಪೊಲೀಸ್ ಕ್ರಮವಿಲ್ಲ. ಇದರ ಪರಿಣಾಮವೇ ಗೋಡ್ಸೆ ಆರಾಧಿಸಿದ ವಿಡಿಯೋ ವೈರಲ್ ಮಾಡುವ ಕೆಲವು ಪುಂಡರು, ಸಿಎಎ ವಿರೋಧ ಮಾಡುವವರನ್ನು ಮುಗಿಸ್ತೀವಿ ಎನ್ನುತ್ತಾರೆ, ಹೊಸಪೇಟೆಯಲ್ಲೊಬ್ಬ ಎನ್‌ಕೌಂಟರ್ ಮಾಡ್ತೀನಿ ಎಂದು ಬೊಗಳುತ್ತಾನೆ.

ವೆರ್ ಇಸ್ ಬೊಮ್ಮಾಯಿ? ಇದೆಲ್ಲದರ ತಾತ್ಪರ್ಯವಿಷ್ಟೇ, ‘ಓಂ’ ಮಿನಿಸ್ಟರ್ ಬೊಮ್ಮಾಯಿ ದೇಶದ್ರೋಹ ಕಾಯ್ದೆಯಷ್ಟೇ ಔಟ್‌ಡೇಟೆಡ್! ಬೊಮ್ಮಾಯಿ ಮತ್ತು ಈ ಕಾಯ್ದೆಯನ್ನು ಮಿಸ್‌ಯೂಸ್ ಮಾಡಲಾಗುತ್ತಿದೆ. ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

ದೇಶದ್ರೋಹವೆಂಬ ಸಮೂಹಸನ್ನಿ

ಈಗ ದೇಶದಲ್ಲಿ ನಿತ್ಯ ಒಂದಿಲ್ಲೊಂದು ಕಡೆ ದೇಶದ್ರೋಹ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ. ಈ ಒಂದೂವರೆ ತಿಂಗಳಲ್ಲಿ ಕರ್ನಾಟಕದಲ್ಲೇ ಐದು ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ವಿಚಿತ್ರವೆಂದರೆ ಈ ಎಲ್ಲ ಪ್ರಕರಣಗಳ ಆರೋಪಿತರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಚಳುವಳಿಯಲ್ಲಿ ಭಾಗಿಯಾದವರು ಅಥವಾ ತಮ್ಮ ನೆಲೆಯಲ್ಲಿ ಅದರ ವಿರುದ್ಧ ಧ್ವನಿ ಎತ್ತಿದವರು!

ಈ ದೇಶದ್ರೋಹದ ಸಮೂಹಸನ್ನಿ ಹೀಗೆ ಹರಡುವುದಕ್ಕೂ, ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧದ ಚಳುವಳಿಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಗಿ ನಿಲುವು ತಾಳಿರುವುದಕ್ಕೂ ಸಂಬಂಧವಿದೆ. ಹೀಗಾಗಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಮಾತಾಡಿದರೆ ಅಥವಾ ಕವನ ಬರೆದರೂ ದೇಶದ್ರೋಹದ ಪ್ರಕರಣ ದಾಖಲಾಗಿವೆ. ಫ್ರೀ ಕಾಶ್ಮೀರ್, ಅಸ್ಪೃಶ್ಯತಾ ಮುಕ್ತಿ ಎಂಬ ಭಿತ್ತಿಪತ್ರ ಹಿಡಿದವರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ. ಇದೆಲ್ಲಕ್ಕಿಂತ ಹೆಚ್ಚು ಸುದ್ದಿಯಾಗಿರುವುದು ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದಳು ಎಂಬುದು.

ದೇಶದ್ರೋಹ ಕಾನೂನು ಬ್ರಿಟಿಷ್ ಕಾಲದ ವಸಾಹತುಶಾಹಿ ಕಾನೂನು. ಪ್ರಜಾಪ್ರಭುತ್ವದಲ್ಲಿ ಅದು ಅಪ್ರಸ್ತುತ ಎಂದು ಸುಪ್ರೀಂಕೋರ್ಟ್, ಕನ್ನಯ್ಯ ಕುಮಾರ ಪ್ರಕರಣದಿಂದ ಇಲ್ಲಿವರೆಗೆ ಹಲವು ಸಲ ಹೇಳಿದೆ. ಸಂಸತ್ತು ಇಂತಹ ವಸಾಹತುಶಾಹಿ ಕಾನೂನುಗಳನ್ನೆಲ್ಲ ರದ್ದು ಮಾಡಬೇಕೆಂದು ಹಲವು ಸಲ ಸೂಚಿಸಿದೆ. ಆದರೆ ಯಾವ ಸರ್ಕಾರವೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಪ್ರಶ್ನೆ ಮಾಡುವುದು, ಟೀಕಿಸುವುದು, ಅಧಿಕಾರಸ್ಥರ ತಪ್ಪನ್ನು ಎತ್ತಿ ತೋರಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳು. ದೇಶದ್ರೋಹ ಕಾನೂನನ್ನು ಈಗಿನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಲ್ಲಿವರೆಗೆ, ಅದು ಭಯೋತ್ಪಾದಕರನ್ನು ಹೊರತುಪಡಿಸಿ ಬೇರೆಯವರ ಮೇಲೆ ಹೂಡಿದ ದೇಶದ್ರೋಹ ಪ್ರಕರಣಗಳಲ್ಲಿ ಒಬ್ಬರಿಗೂ ಶಿಕ್ಷೆ ಆಗಿಲ್ಲ.


ಇದನ್ನೂ ಓದಿ: ಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?


ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಬೀದರ್‌ನ ಶಾಲೆಯೊಂದರ ಮಕ್ಕಳ ನಾಟಕದ ಸಂಭಾಷಣೆ ಆಧರಿಸಿ ಶಾಲೆಯ ಶಿಕ್ಷಕಿ ಮತ್ತು ಪಾತ್ರಧಾರಿ ವಿದ್ಯಾರ್ಥಿನಿಯ ತಾಯಿಯನ್ನು 20 ದಿನ ಜೈಲಿಗೆ ದೂಡಿತ್ತು. ಅವರಿಗೆ ಜಾಮೀನು ನೀಡಿದ ಹೈಕೋರ್ಟ್, ಸರ್ಕಾರದ ಈ ಹುಚ್ಚು ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಫ್ರೀ ಕಾಶ್ಮೀರ್ ಭಿತ್ತಿಪತ್ರ ಹಿಡಿದ, ಸಿಎಎಎ ವಿರೋಧಿ ಕವನ ಬರೆದ ವ್ಯಕ್ತಿಗಳಿಗೆ ಕೋರ್ಟುಗಳು ಯಾವುದೇ ತಕರಾರು ಇಲ್ಲದೇ ಜಾಮೀನು ನೀಡಿವೆ.

ಈಗ ಅಮೂಲ್ಯ ಮುಂದೆ ಏನು ಹೇಳಲಿದ್ದಳು ಎಂಬುದರ ಬಗ್ಗೆ ಯೋಚಿಸದೇ ದೇಶದ್ರೋಹ ಕೇಸು ಹಾಕಲಾಗಿದೆ. ಈ ಪ್ರಕರಣದಲ್ಲೂ ಸರ್ಕಾರಕ್ಕೆ ಮುಖಭಂಗವಾಗುವ ಎಲ್ಲ ಲಕ್ಷಣಗಳಿವೆ. ಯಾವುದೋ ಒಂದು ದೇಶದ ಪರ ಜೈಕಾರ ಹಾಕಿದರೆ, ಭಾರತದ ವಿರುದ್ಧ ಎಂದರ್ಥವಲ್ಲ. ಅಷ್ಟಕ್ಕೂ ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿಲ್ಲ, ಘೋಷಿಸಲು ಬರುವುದೂ ಇಲ್ಲ. ನಿತ್ಯ ಆ ದೇಶದೊಂದಿಗೆ ಸಾವಿರಾರು ಕೋಟಿಗಳ ವಾಣಿಜ್ಯ ವ್ಯವಹಾರ ನಡೆಯುತ್ತಿದೆ.

ದೇಶದ ವಿರುದ್ಧ ಸಂಚು ರೂಪಿಸಿ, ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದರೆ ಮಾತ್ರ ಅದು ದೇಶದ್ರೋಹ ಆಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ನಮ್ಮ ಸರ್ಕಾರಗಳು ಅರ್ಥ ಮಾಡಿಕೊಂಡರಷ್ಟೇ ಈ ಸಮೂಹ ಸನ್ನಿಯಿಂದ ಹೊರಬರಬಹುದು. ಆದರೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ತಮ್ಮ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ದೇಶದ್ರೋಹ ಎನ್ನವುದು ತಾತ್ಕಾಲಿಕ ಅಸ್ತ್ರವಾಗಿರುವುದು ಇವತ್ತಿನ ದೊಡ್ಡ ದುರಂತ.

(ಲೇಖಕರು ಪತ್ರಕರ್ತರು, ಇದರಲ್ಲಿನ ಅಭಿಪ್ರಾಯಗಳು ಅವರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...