Homeಮುಖಪುಟ‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

- Advertisement -
- Advertisement -

ಸಂಘ ಪರಿವಾರದ ಗರ್ಭಗುಡಿಯ ಪೂಜಾರಿ-ಭಟ್ಟರನ್ನು ಮೆಚ್ಚಿಸುವ ಏಕೈಕ ಉದ್ದೇಶದೊಂದಿಗೆ ಕೆಲಸ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಸದ್ಯ ‘ಓಂ’ ಮಿನಿಸ್ಟರ್ ಮಾತ್ರ. ಪೊಲೀಸ್ ಇಲಾಖೆಯಲ್ಲಿ ಮೊದಲಿಂದಲೂ ಬೇರು ಬಿಟ್ಟಿರುವ ಕೆಲವು ಅಧಿಕಾರಿಗಳು ಇದೇ ಸುಸಂದರ್ಭ ಎಂದು ತಮ್ಮ ಹಳೆಯ ಖಾಕಿ ಚೆಡ್ಡಿಗಳನ್ನು ಇಸ್ತ್ರಿ ಮಾಡಿಕೊಂಡು ಧರಿಸುತ್ತಿವೆ. ಮೇಲುಗಡೆ ಇಲಾಖೆಯ ಖಾಕಿ ಪ್ಯಾಂಟು ಅಷ್ಟೇ.

ಇದೆಲ್ಲದರ ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಎ-ಎನ್‌ಪಿಆರ್ ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಲು ಸಂಘ ಪರಿವಾರ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಕಾಣಬಹುದು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿ ಸ್ವಂತ ವ್ಯಕ್ತಿತ್ವವನ್ನು ಬಲಿಕೊಡದೇ, ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದ ಬಸವರಾಜ ಬೊಮ್ಮಾಯಿ ಈಗ ಸಂಘ ಮತ್ತು ಇಲಾಖೆಯಲ್ಲಿರುವ ಕೆಲವು ಚೆಡ್ಡಿ ವೈರಸ್‌ಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಇವತ್ತು ಭಾನುವಾರ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡೇ ಒಂದು ಹೈಲೆವೆಲ್ ಮೀಟಿಂಗ್ ಕರೆದಿದ್ದಾರೆ ಬೊಮ್ಮಾಯಿ ಬಸು. ಹೀಗಾಗಿ ಅವರೀಗ, ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ‘ದೇಶದ್ರೋಹ’ – ಸೆಡಿಷನ್ ಕಾಯ್ದೆ ಎಂಬ ಜಂಗು ಹಿಡಿದ ಅಸ್ತ್ರದ ಮೊರೆ ಹೋಗಿದ್ದಾರೆ. ಈ ಎಲ್ಲ ಗದ್ದಲದಲ್ಲಿ ತನ್ನ ಸ್ವಂತಿಕೆ ಕಳೆದುಕೊಂಡ ಬೊಮ್ಮಾಯಿ, ಕೆಲವು ಅಂಧ ಭಕ್ತರು ಹಾಕುವ ತಲೆಬುಡವಿಲ್ಲದ ಪೋಸ್ಟ್‌ಗಳ ಸಾರಾಂಶವನ್ನು ಸದನದಲ್ಲೇ ಉದ್ಘರಿಸಿ ಹಾಸ್ಯಾಸ್ಪದರಾಗುತ್ತಿದ್ದಾರೆ.

ಮಂಗಳೂರು ಗಲಭೆಯ ಬಗ್ಗೆ ಸ್ಪಷ್ಟ ನಿಲುವಿಲ್ಲ, ಬಾಂಬ್ ಇಡಲು ಹೋದವನಿಗೆ ಸೆಡಿಷನ್ ಕಾಯ್ದೆ ಅನ್ವಯ ಆಗುವುದಿಲ್ಲ, ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕ್ತೀವಿ ಅಂದವರ ಪತ್ತೆಯಿಲ್ಲ, ಬೀದರ್ ಶಾಲೆಯ ಕೇಸಿನಲ್ಲಿ ಹೈಕೋರ್ಟ್ ಉಗಿದರೂ ಇನ್ನೂ ಬುದ್ಧಿ ಬಂದಿಲ್ಲ. ಸದನದಲ್ಲಿ ಕುಮಾರಸ್ವಾಮಿ ಸಿರಾಜ್ ಕವನ ಓದಿದಾಗ ಬಾಯಿ ಬಿಡಲಿಲ್ಲ. ಈಗ ಅಮೂಲ್ಯ ಎಂಬ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ!

ತಿರಬೋಕಿಯಂತೆ ಎಲ್ಲೆಲ್ಲೋ ತಿರುಗುತ್ತ ಮುಸ್ಲಿಮರ ವಿರುದ್ಧ ಅಸಹ್ಯಕರ ಪೋಸ್ಟ್ ಹಾಕುತ್ತಿರುವ ಮಧುಗಿರಿ ಮೋದಿ ಎಂಬುವನನ್ನು ಪತ್ತೆ ಮಾಡಲಾಗುತ್ತಿಲ್ಲ. ನಾಲಿಗೆ ಕತ್ತರಿಸ್ತೀವಿ, ಗೌರಿ ಜಾಗಕ್ಕೆ ಕಳಿಸುತ್ತೇವೆ ಎಂದು ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕುವವನ ವಿರುದ್ಧ ಪೊಲೀಸ್ ಕ್ರಮವಿಲ್ಲ. ಇದರ ಪರಿಣಾಮವೇ ಗೋಡ್ಸೆ ಆರಾಧಿಸಿದ ವಿಡಿಯೋ ವೈರಲ್ ಮಾಡುವ ಕೆಲವು ಪುಂಡರು, ಸಿಎಎ ವಿರೋಧ ಮಾಡುವವರನ್ನು ಮುಗಿಸ್ತೀವಿ ಎನ್ನುತ್ತಾರೆ, ಹೊಸಪೇಟೆಯಲ್ಲೊಬ್ಬ ಎನ್‌ಕೌಂಟರ್ ಮಾಡ್ತೀನಿ ಎಂದು ಬೊಗಳುತ್ತಾನೆ.

ವೆರ್ ಇಸ್ ಬೊಮ್ಮಾಯಿ? ಇದೆಲ್ಲದರ ತಾತ್ಪರ್ಯವಿಷ್ಟೇ, ‘ಓಂ’ ಮಿನಿಸ್ಟರ್ ಬೊಮ್ಮಾಯಿ ದೇಶದ್ರೋಹ ಕಾಯ್ದೆಯಷ್ಟೇ ಔಟ್‌ಡೇಟೆಡ್! ಬೊಮ್ಮಾಯಿ ಮತ್ತು ಈ ಕಾಯ್ದೆಯನ್ನು ಮಿಸ್‌ಯೂಸ್ ಮಾಡಲಾಗುತ್ತಿದೆ. ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

ದೇಶದ್ರೋಹವೆಂಬ ಸಮೂಹಸನ್ನಿ

ಈಗ ದೇಶದಲ್ಲಿ ನಿತ್ಯ ಒಂದಿಲ್ಲೊಂದು ಕಡೆ ದೇಶದ್ರೋಹ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ. ಈ ಒಂದೂವರೆ ತಿಂಗಳಲ್ಲಿ ಕರ್ನಾಟಕದಲ್ಲೇ ಐದು ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ವಿಚಿತ್ರವೆಂದರೆ ಈ ಎಲ್ಲ ಪ್ರಕರಣಗಳ ಆರೋಪಿತರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಚಳುವಳಿಯಲ್ಲಿ ಭಾಗಿಯಾದವರು ಅಥವಾ ತಮ್ಮ ನೆಲೆಯಲ್ಲಿ ಅದರ ವಿರುದ್ಧ ಧ್ವನಿ ಎತ್ತಿದವರು!

ಈ ದೇಶದ್ರೋಹದ ಸಮೂಹಸನ್ನಿ ಹೀಗೆ ಹರಡುವುದಕ್ಕೂ, ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧದ ಚಳುವಳಿಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಗಿ ನಿಲುವು ತಾಳಿರುವುದಕ್ಕೂ ಸಂಬಂಧವಿದೆ. ಹೀಗಾಗಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಮಾತಾಡಿದರೆ ಅಥವಾ ಕವನ ಬರೆದರೂ ದೇಶದ್ರೋಹದ ಪ್ರಕರಣ ದಾಖಲಾಗಿವೆ. ಫ್ರೀ ಕಾಶ್ಮೀರ್, ಅಸ್ಪೃಶ್ಯತಾ ಮುಕ್ತಿ ಎಂಬ ಭಿತ್ತಿಪತ್ರ ಹಿಡಿದವರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ. ಇದೆಲ್ಲಕ್ಕಿಂತ ಹೆಚ್ಚು ಸುದ್ದಿಯಾಗಿರುವುದು ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದಳು ಎಂಬುದು.

ದೇಶದ್ರೋಹ ಕಾನೂನು ಬ್ರಿಟಿಷ್ ಕಾಲದ ವಸಾಹತುಶಾಹಿ ಕಾನೂನು. ಪ್ರಜಾಪ್ರಭುತ್ವದಲ್ಲಿ ಅದು ಅಪ್ರಸ್ತುತ ಎಂದು ಸುಪ್ರೀಂಕೋರ್ಟ್, ಕನ್ನಯ್ಯ ಕುಮಾರ ಪ್ರಕರಣದಿಂದ ಇಲ್ಲಿವರೆಗೆ ಹಲವು ಸಲ ಹೇಳಿದೆ. ಸಂಸತ್ತು ಇಂತಹ ವಸಾಹತುಶಾಹಿ ಕಾನೂನುಗಳನ್ನೆಲ್ಲ ರದ್ದು ಮಾಡಬೇಕೆಂದು ಹಲವು ಸಲ ಸೂಚಿಸಿದೆ. ಆದರೆ ಯಾವ ಸರ್ಕಾರವೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಪ್ರಶ್ನೆ ಮಾಡುವುದು, ಟೀಕಿಸುವುದು, ಅಧಿಕಾರಸ್ಥರ ತಪ್ಪನ್ನು ಎತ್ತಿ ತೋರಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳು. ದೇಶದ್ರೋಹ ಕಾನೂನನ್ನು ಈಗಿನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಲ್ಲಿವರೆಗೆ, ಅದು ಭಯೋತ್ಪಾದಕರನ್ನು ಹೊರತುಪಡಿಸಿ ಬೇರೆಯವರ ಮೇಲೆ ಹೂಡಿದ ದೇಶದ್ರೋಹ ಪ್ರಕರಣಗಳಲ್ಲಿ ಒಬ್ಬರಿಗೂ ಶಿಕ್ಷೆ ಆಗಿಲ್ಲ.


ಇದನ್ನೂ ಓದಿ: ಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?


ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಬೀದರ್‌ನ ಶಾಲೆಯೊಂದರ ಮಕ್ಕಳ ನಾಟಕದ ಸಂಭಾಷಣೆ ಆಧರಿಸಿ ಶಾಲೆಯ ಶಿಕ್ಷಕಿ ಮತ್ತು ಪಾತ್ರಧಾರಿ ವಿದ್ಯಾರ್ಥಿನಿಯ ತಾಯಿಯನ್ನು 20 ದಿನ ಜೈಲಿಗೆ ದೂಡಿತ್ತು. ಅವರಿಗೆ ಜಾಮೀನು ನೀಡಿದ ಹೈಕೋರ್ಟ್, ಸರ್ಕಾರದ ಈ ಹುಚ್ಚು ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಫ್ರೀ ಕಾಶ್ಮೀರ್ ಭಿತ್ತಿಪತ್ರ ಹಿಡಿದ, ಸಿಎಎಎ ವಿರೋಧಿ ಕವನ ಬರೆದ ವ್ಯಕ್ತಿಗಳಿಗೆ ಕೋರ್ಟುಗಳು ಯಾವುದೇ ತಕರಾರು ಇಲ್ಲದೇ ಜಾಮೀನು ನೀಡಿವೆ.

ಈಗ ಅಮೂಲ್ಯ ಮುಂದೆ ಏನು ಹೇಳಲಿದ್ದಳು ಎಂಬುದರ ಬಗ್ಗೆ ಯೋಚಿಸದೇ ದೇಶದ್ರೋಹ ಕೇಸು ಹಾಕಲಾಗಿದೆ. ಈ ಪ್ರಕರಣದಲ್ಲೂ ಸರ್ಕಾರಕ್ಕೆ ಮುಖಭಂಗವಾಗುವ ಎಲ್ಲ ಲಕ್ಷಣಗಳಿವೆ. ಯಾವುದೋ ಒಂದು ದೇಶದ ಪರ ಜೈಕಾರ ಹಾಕಿದರೆ, ಭಾರತದ ವಿರುದ್ಧ ಎಂದರ್ಥವಲ್ಲ. ಅಷ್ಟಕ್ಕೂ ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿಲ್ಲ, ಘೋಷಿಸಲು ಬರುವುದೂ ಇಲ್ಲ. ನಿತ್ಯ ಆ ದೇಶದೊಂದಿಗೆ ಸಾವಿರಾರು ಕೋಟಿಗಳ ವಾಣಿಜ್ಯ ವ್ಯವಹಾರ ನಡೆಯುತ್ತಿದೆ.

ದೇಶದ ವಿರುದ್ಧ ಸಂಚು ರೂಪಿಸಿ, ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದರೆ ಮಾತ್ರ ಅದು ದೇಶದ್ರೋಹ ಆಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ನಮ್ಮ ಸರ್ಕಾರಗಳು ಅರ್ಥ ಮಾಡಿಕೊಂಡರಷ್ಟೇ ಈ ಸಮೂಹ ಸನ್ನಿಯಿಂದ ಹೊರಬರಬಹುದು. ಆದರೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ತಮ್ಮ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ದೇಶದ್ರೋಹ ಎನ್ನವುದು ತಾತ್ಕಾಲಿಕ ಅಸ್ತ್ರವಾಗಿರುವುದು ಇವತ್ತಿನ ದೊಡ್ಡ ದುರಂತ.

(ಲೇಖಕರು ಪತ್ರಕರ್ತರು, ಇದರಲ್ಲಿನ ಅಭಿಪ್ರಾಯಗಳು ಅವರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...