Homeಮುಖಪುಟ‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

‘ ಓಂ’ ಮಿನಿಸ್ಟರ್ ಬೊಮ್ಮಾಯಿ, ದೇಶದ್ರೋಹಿ ಕಾಯ್ದೆ : ಎರಡೂ ಮಿಸ್‌ಯೂಸ್ ಆಗ್ತಿವೆ, ಎರಡೂ ಔಟ್‌ಡೇಟೆಡ್!

ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

- Advertisement -
- Advertisement -

ಸಂಘ ಪರಿವಾರದ ಗರ್ಭಗುಡಿಯ ಪೂಜಾರಿ-ಭಟ್ಟರನ್ನು ಮೆಚ್ಚಿಸುವ ಏಕೈಕ ಉದ್ದೇಶದೊಂದಿಗೆ ಕೆಲಸ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಸದ್ಯ ‘ಓಂ’ ಮಿನಿಸ್ಟರ್ ಮಾತ್ರ. ಪೊಲೀಸ್ ಇಲಾಖೆಯಲ್ಲಿ ಮೊದಲಿಂದಲೂ ಬೇರು ಬಿಟ್ಟಿರುವ ಕೆಲವು ಅಧಿಕಾರಿಗಳು ಇದೇ ಸುಸಂದರ್ಭ ಎಂದು ತಮ್ಮ ಹಳೆಯ ಖಾಕಿ ಚೆಡ್ಡಿಗಳನ್ನು ಇಸ್ತ್ರಿ ಮಾಡಿಕೊಂಡು ಧರಿಸುತ್ತಿವೆ. ಮೇಲುಗಡೆ ಇಲಾಖೆಯ ಖಾಕಿ ಪ್ಯಾಂಟು ಅಷ್ಟೇ.

ಇದೆಲ್ಲದರ ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಎ-ಎನ್‌ಪಿಆರ್ ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಲು ಸಂಘ ಪರಿವಾರ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಕಾಣಬಹುದು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿ ಸ್ವಂತ ವ್ಯಕ್ತಿತ್ವವನ್ನು ಬಲಿಕೊಡದೇ, ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದ ಬಸವರಾಜ ಬೊಮ್ಮಾಯಿ ಈಗ ಸಂಘ ಮತ್ತು ಇಲಾಖೆಯಲ್ಲಿರುವ ಕೆಲವು ಚೆಡ್ಡಿ ವೈರಸ್‌ಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಇವತ್ತು ಭಾನುವಾರ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡೇ ಒಂದು ಹೈಲೆವೆಲ್ ಮೀಟಿಂಗ್ ಕರೆದಿದ್ದಾರೆ ಬೊಮ್ಮಾಯಿ ಬಸು. ಹೀಗಾಗಿ ಅವರೀಗ, ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ‘ದೇಶದ್ರೋಹ’ – ಸೆಡಿಷನ್ ಕಾಯ್ದೆ ಎಂಬ ಜಂಗು ಹಿಡಿದ ಅಸ್ತ್ರದ ಮೊರೆ ಹೋಗಿದ್ದಾರೆ. ಈ ಎಲ್ಲ ಗದ್ದಲದಲ್ಲಿ ತನ್ನ ಸ್ವಂತಿಕೆ ಕಳೆದುಕೊಂಡ ಬೊಮ್ಮಾಯಿ, ಕೆಲವು ಅಂಧ ಭಕ್ತರು ಹಾಕುವ ತಲೆಬುಡವಿಲ್ಲದ ಪೋಸ್ಟ್‌ಗಳ ಸಾರಾಂಶವನ್ನು ಸದನದಲ್ಲೇ ಉದ್ಘರಿಸಿ ಹಾಸ್ಯಾಸ್ಪದರಾಗುತ್ತಿದ್ದಾರೆ.

ಮಂಗಳೂರು ಗಲಭೆಯ ಬಗ್ಗೆ ಸ್ಪಷ್ಟ ನಿಲುವಿಲ್ಲ, ಬಾಂಬ್ ಇಡಲು ಹೋದವನಿಗೆ ಸೆಡಿಷನ್ ಕಾಯ್ದೆ ಅನ್ವಯ ಆಗುವುದಿಲ್ಲ, ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕ್ತೀವಿ ಅಂದವರ ಪತ್ತೆಯಿಲ್ಲ, ಬೀದರ್ ಶಾಲೆಯ ಕೇಸಿನಲ್ಲಿ ಹೈಕೋರ್ಟ್ ಉಗಿದರೂ ಇನ್ನೂ ಬುದ್ಧಿ ಬಂದಿಲ್ಲ. ಸದನದಲ್ಲಿ ಕುಮಾರಸ್ವಾಮಿ ಸಿರಾಜ್ ಕವನ ಓದಿದಾಗ ಬಾಯಿ ಬಿಡಲಿಲ್ಲ. ಈಗ ಅಮೂಲ್ಯ ಎಂಬ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ!

ತಿರಬೋಕಿಯಂತೆ ಎಲ್ಲೆಲ್ಲೋ ತಿರುಗುತ್ತ ಮುಸ್ಲಿಮರ ವಿರುದ್ಧ ಅಸಹ್ಯಕರ ಪೋಸ್ಟ್ ಹಾಕುತ್ತಿರುವ ಮಧುಗಿರಿ ಮೋದಿ ಎಂಬುವನನ್ನು ಪತ್ತೆ ಮಾಡಲಾಗುತ್ತಿಲ್ಲ. ನಾಲಿಗೆ ಕತ್ತರಿಸ್ತೀವಿ, ಗೌರಿ ಜಾಗಕ್ಕೆ ಕಳಿಸುತ್ತೇವೆ ಎಂದು ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕುವವನ ವಿರುದ್ಧ ಪೊಲೀಸ್ ಕ್ರಮವಿಲ್ಲ. ಇದರ ಪರಿಣಾಮವೇ ಗೋಡ್ಸೆ ಆರಾಧಿಸಿದ ವಿಡಿಯೋ ವೈರಲ್ ಮಾಡುವ ಕೆಲವು ಪುಂಡರು, ಸಿಎಎ ವಿರೋಧ ಮಾಡುವವರನ್ನು ಮುಗಿಸ್ತೀವಿ ಎನ್ನುತ್ತಾರೆ, ಹೊಸಪೇಟೆಯಲ್ಲೊಬ್ಬ ಎನ್‌ಕೌಂಟರ್ ಮಾಡ್ತೀನಿ ಎಂದು ಬೊಗಳುತ್ತಾನೆ.

ವೆರ್ ಇಸ್ ಬೊಮ್ಮಾಯಿ? ಇದೆಲ್ಲದರ ತಾತ್ಪರ್ಯವಿಷ್ಟೇ, ‘ಓಂ’ ಮಿನಿಸ್ಟರ್ ಬೊಮ್ಮಾಯಿ ದೇಶದ್ರೋಹ ಕಾಯ್ದೆಯಷ್ಟೇ ಔಟ್‌ಡೇಟೆಡ್! ಬೊಮ್ಮಾಯಿ ಮತ್ತು ಈ ಕಾಯ್ದೆಯನ್ನು ಮಿಸ್‌ಯೂಸ್ ಮಾಡಲಾಗುತ್ತಿದೆ. ಎಂ.ಎನ್. ರಾಯ್ ಅವರ ತತ್ವಗಳನ್ನು ತಕ್ಕ ಮಟ್ಟಿಗೆ ಪಾಲಿಸುತ್ತಿದ್ದ ಎಸ್.ಆರ್ ಬೊಮ್ಮಾಯಿಯವರ ಆತ್ಮ, ಸ್ವಂತಿಕೆ ಅಡಕ್ಕಿಟ್ಟು ಗುಲಾಮಗಿರಿ ಮಾಡುತ್ತಿರುವ ಮಗನ ಪರಿಸ್ಥಿತಿ ನೋಡಿ ವಿಷಾಧಿಸುತ್ತಿರಬೇಕು.

ದೇಶದ್ರೋಹವೆಂಬ ಸಮೂಹಸನ್ನಿ

ಈಗ ದೇಶದಲ್ಲಿ ನಿತ್ಯ ಒಂದಿಲ್ಲೊಂದು ಕಡೆ ದೇಶದ್ರೋಹ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ. ಈ ಒಂದೂವರೆ ತಿಂಗಳಲ್ಲಿ ಕರ್ನಾಟಕದಲ್ಲೇ ಐದು ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ವಿಚಿತ್ರವೆಂದರೆ ಈ ಎಲ್ಲ ಪ್ರಕರಣಗಳ ಆರೋಪಿತರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಚಳುವಳಿಯಲ್ಲಿ ಭಾಗಿಯಾದವರು ಅಥವಾ ತಮ್ಮ ನೆಲೆಯಲ್ಲಿ ಅದರ ವಿರುದ್ಧ ಧ್ವನಿ ಎತ್ತಿದವರು!

ಈ ದೇಶದ್ರೋಹದ ಸಮೂಹಸನ್ನಿ ಹೀಗೆ ಹರಡುವುದಕ್ಕೂ, ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧದ ಚಳುವಳಿಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಗಿ ನಿಲುವು ತಾಳಿರುವುದಕ್ಕೂ ಸಂಬಂಧವಿದೆ. ಹೀಗಾಗಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಮಾತಾಡಿದರೆ ಅಥವಾ ಕವನ ಬರೆದರೂ ದೇಶದ್ರೋಹದ ಪ್ರಕರಣ ದಾಖಲಾಗಿವೆ. ಫ್ರೀ ಕಾಶ್ಮೀರ್, ಅಸ್ಪೃಶ್ಯತಾ ಮುಕ್ತಿ ಎಂಬ ಭಿತ್ತಿಪತ್ರ ಹಿಡಿದವರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ. ಇದೆಲ್ಲಕ್ಕಿಂತ ಹೆಚ್ಚು ಸುದ್ದಿಯಾಗಿರುವುದು ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದಳು ಎಂಬುದು.

ದೇಶದ್ರೋಹ ಕಾನೂನು ಬ್ರಿಟಿಷ್ ಕಾಲದ ವಸಾಹತುಶಾಹಿ ಕಾನೂನು. ಪ್ರಜಾಪ್ರಭುತ್ವದಲ್ಲಿ ಅದು ಅಪ್ರಸ್ತುತ ಎಂದು ಸುಪ್ರೀಂಕೋರ್ಟ್, ಕನ್ನಯ್ಯ ಕುಮಾರ ಪ್ರಕರಣದಿಂದ ಇಲ್ಲಿವರೆಗೆ ಹಲವು ಸಲ ಹೇಳಿದೆ. ಸಂಸತ್ತು ಇಂತಹ ವಸಾಹತುಶಾಹಿ ಕಾನೂನುಗಳನ್ನೆಲ್ಲ ರದ್ದು ಮಾಡಬೇಕೆಂದು ಹಲವು ಸಲ ಸೂಚಿಸಿದೆ. ಆದರೆ ಯಾವ ಸರ್ಕಾರವೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಪ್ರಶ್ನೆ ಮಾಡುವುದು, ಟೀಕಿಸುವುದು, ಅಧಿಕಾರಸ್ಥರ ತಪ್ಪನ್ನು ಎತ್ತಿ ತೋರಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳು. ದೇಶದ್ರೋಹ ಕಾನೂನನ್ನು ಈಗಿನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಲ್ಲಿವರೆಗೆ, ಅದು ಭಯೋತ್ಪಾದಕರನ್ನು ಹೊರತುಪಡಿಸಿ ಬೇರೆಯವರ ಮೇಲೆ ಹೂಡಿದ ದೇಶದ್ರೋಹ ಪ್ರಕರಣಗಳಲ್ಲಿ ಒಬ್ಬರಿಗೂ ಶಿಕ್ಷೆ ಆಗಿಲ್ಲ.


ಇದನ್ನೂ ಓದಿ: ಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?


ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಬೀದರ್‌ನ ಶಾಲೆಯೊಂದರ ಮಕ್ಕಳ ನಾಟಕದ ಸಂಭಾಷಣೆ ಆಧರಿಸಿ ಶಾಲೆಯ ಶಿಕ್ಷಕಿ ಮತ್ತು ಪಾತ್ರಧಾರಿ ವಿದ್ಯಾರ್ಥಿನಿಯ ತಾಯಿಯನ್ನು 20 ದಿನ ಜೈಲಿಗೆ ದೂಡಿತ್ತು. ಅವರಿಗೆ ಜಾಮೀನು ನೀಡಿದ ಹೈಕೋರ್ಟ್, ಸರ್ಕಾರದ ಈ ಹುಚ್ಚು ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಫ್ರೀ ಕಾಶ್ಮೀರ್ ಭಿತ್ತಿಪತ್ರ ಹಿಡಿದ, ಸಿಎಎಎ ವಿರೋಧಿ ಕವನ ಬರೆದ ವ್ಯಕ್ತಿಗಳಿಗೆ ಕೋರ್ಟುಗಳು ಯಾವುದೇ ತಕರಾರು ಇಲ್ಲದೇ ಜಾಮೀನು ನೀಡಿವೆ.

ಈಗ ಅಮೂಲ್ಯ ಮುಂದೆ ಏನು ಹೇಳಲಿದ್ದಳು ಎಂಬುದರ ಬಗ್ಗೆ ಯೋಚಿಸದೇ ದೇಶದ್ರೋಹ ಕೇಸು ಹಾಕಲಾಗಿದೆ. ಈ ಪ್ರಕರಣದಲ್ಲೂ ಸರ್ಕಾರಕ್ಕೆ ಮುಖಭಂಗವಾಗುವ ಎಲ್ಲ ಲಕ್ಷಣಗಳಿವೆ. ಯಾವುದೋ ಒಂದು ದೇಶದ ಪರ ಜೈಕಾರ ಹಾಕಿದರೆ, ಭಾರತದ ವಿರುದ್ಧ ಎಂದರ್ಥವಲ್ಲ. ಅಷ್ಟಕ್ಕೂ ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿಲ್ಲ, ಘೋಷಿಸಲು ಬರುವುದೂ ಇಲ್ಲ. ನಿತ್ಯ ಆ ದೇಶದೊಂದಿಗೆ ಸಾವಿರಾರು ಕೋಟಿಗಳ ವಾಣಿಜ್ಯ ವ್ಯವಹಾರ ನಡೆಯುತ್ತಿದೆ.

ದೇಶದ ವಿರುದ್ಧ ಸಂಚು ರೂಪಿಸಿ, ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದರೆ ಮಾತ್ರ ಅದು ದೇಶದ್ರೋಹ ಆಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ನಮ್ಮ ಸರ್ಕಾರಗಳು ಅರ್ಥ ಮಾಡಿಕೊಂಡರಷ್ಟೇ ಈ ಸಮೂಹ ಸನ್ನಿಯಿಂದ ಹೊರಬರಬಹುದು. ಆದರೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮತ್ತು ತಮ್ಮ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ದೇಶದ್ರೋಹ ಎನ್ನವುದು ತಾತ್ಕಾಲಿಕ ಅಸ್ತ್ರವಾಗಿರುವುದು ಇವತ್ತಿನ ದೊಡ್ಡ ದುರಂತ.

(ಲೇಖಕರು ಪತ್ರಕರ್ತರು, ಇದರಲ್ಲಿನ ಅಭಿಪ್ರಾಯಗಳು ಅವರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...