Homeಮುಖಪುಟ2 ತಿಂಗಳು ಬಂಧನದ ನಂತರ ಓಮರ್‌ ಅಬ್ದುಲ್ಲಾ ಮತ್ತು ಫಾರೂಕ್‌ ಅಬ್ದುಲ್ಲಾಗೆ ಪಕ್ಷದ ನಾಯಕರನ್ನು ಭೇಟಿಯಾಗುವ...

2 ತಿಂಗಳು ಬಂಧನದ ನಂತರ ಓಮರ್‌ ಅಬ್ದುಲ್ಲಾ ಮತ್ತು ಫಾರೂಕ್‌ ಅಬ್ದುಲ್ಲಾಗೆ ಪಕ್ಷದ ನಾಯಕರನ್ನು ಭೇಟಿಯಾಗುವ ಅವಕಾಶ..

- Advertisement -
- Advertisement -

ಎರಡು ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಂತರ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥರಾದ ಒಮರ್ ಅಬ್ದುಲ್ಲಾ ಮತ್ತು ಅವರ ತಂದೆ ಮತ್ತು ಫಾರೂಕ್ ಅಬ್ದುಲ್ಲಾ ಅವರನ್ನು ಮೊದಲ ಬಾರಿಗೆ ತಮ್ಮ ಪಕ್ಷದ ಮುಖಂಡರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.

ಕೇಂದ್ರ ಸರ್ಕಾರವು ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮುನ್ನ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧನದಲ್ಲಿರಿಸಿದ್ದರು. ಇದು ಮೂಲಭೂತ ಹಕ್ಕುಗಳ ನಿರಾಕರಣೆ ಎಂದು ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ಕೇಳಿಬಂದಿತ್ತು.

ಸಭೆಯ ನಂತರ, ನ್ಯಾಷನಲ್ ಕಾನ್ಫರೆನ್ಸ್‌ನ ಹಿರಿಯ ನಾಯಕರಾದ ಅಕ್ಬರ್ ಲೋನ್ ಮತ್ತು ಹಸ್ನೈನ್ ಮಸೂಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ “ಅವರ ಯೋಗಕ್ಷೇಮದ ಬಗ್ಗೆ ಕೇಳಲು ನಾವು ಬಂದಿದ್ದೇವೆ. ಯಾವುದೇ ರಾಜಕೀಯವನ್ನು ಚರ್ಚಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, “ಸಂಪೂರ್ಣ ನಾಯಕತ್ವ ಜೈಲಿನಲ್ಲಿರುವುದರಿಂದ ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಎರಡನೇ ಹಂತದ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆಯಲ್ಲಿ ಪಕ್ಷವು ಭಾಗವಹಿಸುವುದಿಲ್ಲ” ಎಂದು ಉಭಯ ನಾಯಕರು ಹೇಳಿದ್ದಾರೆ.

ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ ಚುನಾವಣೆ ಘೋಷಣೆಯಾದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ಸರ್ಕಾರ ಸಡಿಲಗೊಳಿಸಿತ್ತು. ಜಮ್ಮುವಿನಲ್ಲಿ ಬಂಧನಕ್ಕೊಳಗಾದ ಎಲ್ಲ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಲಾಗಿದ್ದರೆ, ಗವರ್ನರ್ ಸತ್ಯ ಪಾಲ್ ಮಲಿಕ್ ಅವರ ಸಲಹೆಗಾರ ಫಾರೂಕ್ ಖಾನ್, ಕಾಶ್ಮೀರಿ ನಾಯಕರನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು.

ಮಾಜಿ ಮುಖ್ಯಮಂತ್ರಿಗಳಾದ 83 ವರ್ಷದ ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥ ಮೆಹಬೂಬಾ ಮುಫ್ತಿ ಸೇರಿದಂತೆ ಸುಮಾರು 400 ರಾಜಕೀಯ ಮುಖಂಡರನ್ನು ಬಂಧನ ಅಥವಾ ಗೃಹಬಂಧನದಲ್ಲಿರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...