Homeಕರೋನಾ ತಲ್ಲಣಒಮೈಕ್ರಾನ್ ಆತಂಕ: ದೆಹಲಿಯಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ನಿಷೇಧ

ಒಮೈಕ್ರಾನ್ ಆತಂಕ: ದೆಹಲಿಯಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ನಿಷೇಧ

- Advertisement -
- Advertisement -

ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಳ ಮತ್ತು ಒಮೈಕ್ರಾನ್‌ ರೂಪಾಂತರದ ಆತಂಕದಿಂದಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ)ವು ರಾಜ್ಯದಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಕೂಟ ನಡೆಯದಂತೆ ನೋಡಿಕೊಳ್ಳಲು ಬುಧವಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಜೊತೆಗೆ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಮುಂಚಿತವಾಗಿ ಸಂಭಾವ್ಯ ಕೊರೊನಾ ಸೂಪರ್‌ಸ್ಪ್ರೆಡರ್ ಪ್ರದೇಶಗಳನ್ನು ಗುರುತಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ (DMs) ಆದೇಶಿಸಿದೆ. ಜನರು ಸಾಮಾಜಿಕ ಅಂತರದ ಮಾನದಂಡಗಳನ್ನು ಅನುಸರಿಸುವುದನ್ನು ಮತ್ತು ಮಾಸ್ಕ್‌ಗಳನ್ನು ಧರಿಸುವ ಬಗ್ಗೆ ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಉಪ ಕಮಿಷನರ್‌ಗಳಿಗೆ (ಡಿಸಿಪಿಗಳು) ಪ್ರಾಧಿಕಾರವು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಒಮೈಕ್ರಾನ್ ಆತಂಕದ ನಡುವೆಯೂ ಭಾರತದಲ್ಲಿ ಹೊಸ ಪ್ರಕರಣಗಳಲ್ಲಿ ಇಳಿಕೆ

“ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ತಮ್ಮ ವ್ಯಾಪ್ತಿಗೆ ಬರುವ ಸಂಪೂರ್ಣ ಪ್ರದೇಶದ ತೀವ್ರ ಸಮೀಕ್ಷೆಯನ್ನು ನಡೆಸಬೇಕು. ಕೊರೊನಾ ವೈರಸ್ ಮತ್ತು ಅದರ ಒಮೈಕ್ರಾನ್ ರೂಪಾಂತರದ ಸೂಪರ್‌ಸ್ಪ್ರೆಡರ್‌ಗಳಾಗುವ ಸಾಮರ್ಥ್ಯವನ್ನು ಹೊಂದಿರುವ ಕಾಲೋನಿಗಳ ಮಾರುಕಟ್ಟೆಗಳು ಮತ್ತು ಕಿಕ್ಕಿರಿದ ಸ್ಥಳಗಳನ್ನು ಗುರುತಿಸಬೇಕು” ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.

ಕೊರೊನಾ ಪ್ರಕರಣಗಳಲ್ಲಿ ಯಾವುದೇ ಸಂಭವನೀಯ ಉಲ್ಬಣವನ್ನು ತಪ್ಪಿಸಲು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಎಲ್ಲಾ DM ಗಳು ಮತ್ತು DCP ಗಳು ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಜಾರಿ ತಂಡಗಳನ್ನು ನಿಯೋಜಿಸಬೇಕು ಎಂದು ಅದು ಹೇಳಿದೆ.

ಭಾರತದಾದ್ಯಂತ ಇಲ್ಲಿಯವರೆಗೆ 213 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ 57 ಪ್ರಕರಣಗಳು ದಾಖಲಾಗಿದ್ದು, ಇದು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗಿಂತ ಹೆಚ್ಚಗಿದೆ. ಉಳಿದಂತೆ ಮಹಾರಾಷ್ಟ್ರ (54), ತೆಲಂಗಾಣ (24), ಕರ್ನಾಟಕ (19), ರಾಜಸ್ಥಾನ (18) , ಕೇರಳ (15) ಮತ್ತು ಗುಜರಾತ್ (14) ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...