Homeಕರೋನಾ ತಲ್ಲಣಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿರುವ ಕಾರಣ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಈ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅದು ಹೇಳಿದೆ.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದರೆ, ಇತರ ನಿರ್ಬಂಧಗಳು ರಾತ್ರಿ ಕರ್ಫ್ಯೂ ಜೊತೆಗೆ ಮುಂದಿನ ಆದೇಶದವರೆಗೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

ಈ ಮಧ್ಯೆ, ಅತ್ಯಗತ್ಯ ಕಚೇರಿಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ಕೇಳಲಾಗಿದ್ದು, ಖಾಸಗಿ ಕಚೇರಿಗಳು 50% ಸಾಮರ್ಥ್ಯದೊಂದಿಗೆ ಕೆಲಸ ಮಾಡುವಂತೆ ಆದೇಶಿಸಲಾಗಿದೆ.

ಬಸ್‌ಗಳು ಮತ್ತು ಮೆಟ್ರೋಗಳು ಪೂರ್ಣ ಸಾಮರ್ಥ್ಯದಲ್ಲಿ ಓಡುತ್ತವೆ

ಡಿಡಿಎಂಎ ಆದೇಶವನ್ನು ಘೋಷಿಸುವಾಗ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಮೆಟ್ರೋಗಳ ಹೊರಗೆ ದೀರ್ಘ ಸರತಿ ಸಾಲುಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಅವ್ಯವಸ್ಥೆ ಕಂಡುಬಂದಿದೆ. ಇದು ನಗರದಲ್ಲಿ ಓಮೈಕ್ರಾನ್ ಹರಡಲು ಸುಲಭವಾಗಿ ಕಾರಣವಾಗಬಹುದು. ಸಾರ್ವಜನಿಕ ಸಾರಿಗೆಗಳಾದ ಬಸ್‌ಗಳು ಮತ್ತು ಮೆಟ್ರೋಗಳು ಇಂದಿನಿಂದ ಪೂರ್ಣ ಸಾಮರ್ಥ್ಯದಲ್ಲಿ ಆದರೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಓಡಿಸಲು ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಕಳೆದ ವಾರ ಸರ್ಕಾರವು ಬಸ್‌ಗಳು ಮತ್ತು ಮೆಟ್ರೋಗಳ ಸಾಮರ್ಥ್ಯವನ್ನು 50% ಕ್ಕೆ ನಿರ್ಬಂಧಿಸಲಾಗಿತ್ತು. ಹೀಗಾಗಿ ನಗರದ ಬಸ್ ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಅವ್ಯವಸ್ಥೆ ಕಂಡುಬಂದಿತ್ತು.

ಇದನ್ನೂ ಓದಿ:2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ಅಗತ್ಯವಿದ್ದಲ್ಲಿ ಅಥವಾ ಅಗತ್ಯ ಸೇವೆಗಳಿಗಾಗಿ ಮಾತ್ರ ನಿವಾಸಿಗಳು ತಮ್ಮ ಮನೆಯಿಂದ ಹೊರಬರಬೇಕು ಎಂದು ಮನೀಶ್‌ ಸಿಸೋಡಿಯಾ ಒತ್ತಿ ಹೇಳಿದ್ದಾರೆ.

ಸೋಮವಾರ ದೆಹಲಿಯಲ್ಲಿ 4,099 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದಾಗಿ ಒಬ್ಬರು ಸಾವನ್ನಪ್ಪಿದ್ದಾರೆ. 1,509 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ 8-10 ದಿನಗಳಲ್ಲಿ, ದೆಹಲಿಯಲ್ಲಿ 11000 ಪಾಸಿಟಿವ್‌‌ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 350 ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಇವುಗಳಲ್ಲಿ 124 ಜನರು ಕೃತಕ ಆಮ್ಲಜನಕದ ಆರೈಕೆಯಲ್ಲಿದ್ದರೆ, ಏಳು ಜನರು ವೆಂಟಿಲೇಟರ್‌ಗಳಲ್ಲಿದ್ದಾರೆ ಎಂದು ಸಿಸೋಡಿಯಾ ಹೇಳಿದ್ದಾರೆ.

“ಓಮೈಕ್ರಾನ್ ಗ್ರಾಫ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೆಹಲಿ ಕೂಡಾ ಪ್ರಪಂಚದ ಇತರ ದೇಶಗಳಂತೆಯೇ ಅದೇ ಪ್ರವೃತ್ತಿಯನ್ನು ಹೊಂದಿದೆ. ಇದು ಯಾವುದೇ ಹಾನಿಗೆ ಕಾರಣವಾಗುವುದಿಲ್ಲ. ತಜ್ಞರ ಪ್ರಕಾರ, ಓಮಿಕ್ರಾನ್ ಸೌಮ್ಯವಾಗಿರುತ್ತದೆ ಮತ್ತು ಹೆಚ್ಚಿನ ರೋಗಿಗಳು ಲಕ್ಷಣರಹಿತವಾಗಿರುತ್ತಾರೆ. ಜನರು ಬೇಗನೆ ಸುಧಾರಿಸುತ್ತಿದ್ದಾರೆ. ನಾವು ಕೋವಿಡ್ ಬಗ್ಗೆ ಬಹಳ ಜಾಗರೂಕರಾಗಿರಬೇಕು ಮತ್ತು ಸರ್ಕಾರ ಸಿದ್ಧಪಡಿಸಿದ ಹೋಮ್ ಐಸೋಲೇಶನ್ ಮಾಡ್ಯೂಲ್ ಅನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರಿನ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...