Homeಕೊರೊನಾ5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್‌ ಡೋಸ್ ಅದನ್ನು ತಡೆಯದು ಎಂದ...

5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್‌ ಡೋಸ್ ಅದನ್ನು ತಡೆಯದು ಎಂದ ತಜ್ಞರು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,94,720 ಕೊರೊನಾ ಪ್ರಕರಣಗಳು, ರಾಜ್ಯದಲ್ಲಿ 14,473 ಹೊಸ ಕೇಸಸ್ ವರದಿಯಾಗಿವೆ.

- Advertisement -
- Advertisement -

ಕೋವಿಡ್‌ನ ಓಮಿಕ್ರಾನ್ ರೂಪಾಂತರ ಸೋಂಕನ್ನು ತಡೆಯಲಾಗದು. ಪ್ರತಿಯೊಬ್ಬರೂ ಅಂತಿಮವಾಗಿ ಸೋಂಕಿಗೆ ಒಳಗಾಗುತ್ತಾರೆ. ಬೂಸ್ಟರ್ ಲಸಿಕೆ ಡೋಸ್‌ಗಳು ವೈರಸ್‌ನ ವೇಗದ ಹರಡುವಿಕೆಯನ್ನು ತಡೆಯುವುದಿಲ್ಲ ಎಂದು ಉನ್ನತ ಸರ್ಕಾರಿ ತಜ್ಞರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಬೂಸ್ಟರ್‌ ಡೋಸ್ ನೀಡಿದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ಸೋಂಕು ಸಂಭವಿಸುತ್ತದೆ. ಪ್ರಪಂಚದಾದ್ಯಂತ ಇದು ಸಂಭವಿಸಿದೆ. ಕೊರೊನಾ ಇನ್ನು ಮುಂದೆ ಭಯಾನಕ ರೋಗವಲ್ಲ. ಕೋವಿಡ್‌ನ ಈ ಹೊಸ ರೂಪಾಂತರ ಸೌಮ್ಯವಾಗಿದ್ದು, ಸೋಂಕಿತರು ಆಸ್ಪತ್ರೆಗೆ ಸೇರಬೇಕಾಗಿಲ್ಲ. ಕಡಿಮೆ ಸಂಖ್ಯೆಯಲ್ಲಿ ಆಸ್ಪತ್ರೆಗೆ ಸೇರುವ ಅನಿವಾರ್ಯತೆ ಇರುತ್ತದೆ. ಇದು ನಾವು ನಿಭಾಯಿಸಬಹುದಾದ ಕಾಯಿಲೆಯಾಗಿದೆ” ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆಯ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಜೈಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ.

“ಇತರ ದೇಶಗಳಂತೆ ಭಾರತಕ್ಕೆ ಈ ವೈರಸ್ ಕೆಟ್ಟದಾಗಿ ಪರಿಣಾಮ ಬೀರಿಲ್ಲ. ದೇಶದಲ್ಲಿ ಕೊರೊನಾ ಲಸಿಕೆಗಳನ್ನು ಪರಿಚಯಿಸುವ ಮೊದಲೇ ದೇಶದ ಶೇಕಡಾ 85 ರಷ್ಟು ಜನರು ಸೋಂಕಿಗೆ ಒಳಗಾಗಿದ್ದರು. ಆದ್ದರಿಂದ, ಮೊದಲ ಡೋಸ್ ಮೂಲಭೂತವಾಗಿಯೇ ಒಂದು ಬೂಸ್ಟರ್ ಡೋಸ್” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

“ನಮ್ಮಲ್ಲಿ ಬಹುಪಾಲು ಜನರಿಗೆ ನಾವು ಸೋಂಕಿಗೆ ಒಳಗಾಗಿದ್ದೇವೆ ಎಂದು ತಿಳಿದಿರುವುದಿಲ್ಲ, ಬಹುಶಃ 80% ಕ್ಕಿಂತ ಹೆಚ್ಚು ಜನರು ಸೋಂಕಿತರಾಗಿದ್ದರೂ ಸಹ ತಿಳಿದಿರುವುದಿಲ್ಲ” ಎಂದು ಹೇಳಿದ್ದಾರೆ.

“ನಾವು ಇಲ್ಲಿಯವರೆಗೆ ಸರ್ಕಾರದ ಯಾವುದೇ ಸಂಸ್ಥೆಗಳಿಂದ ಬೂಸ್ಟರ್ ಡೋಸ್ ಅನ್ನು ಸೂಚಿಸಿಲ್ಲ. ಮುನ್ನೆಚ್ಚರಿಕೆ ಡೋಸ್ ಅನ್ನು ಸೂಚಿಸಲಾಗಿದೆ, ಏಕೆಂದರೆ ಕೆಲವು ಜನರು ಅದರಲ್ಲೂ ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರು, ಎರಡನೇ ಡೋಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂಬ ವರದಿಗಳಿವೆ” ಎಂದಿದ್ದಾರೆ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಜೈಪ್ರಕಾಶ್ ಮುಳಿಯಿಲ್.

ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು 2 ಲಕ್ಷ ಗಡಿಯತ್ತ ಇದ್ದು, ಕಳೆದ 24 ಗಂಟೆಗಳಲ್ಲಿ 1,94,720 ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಂಗಳವಾರ ವರದಿಯಾಗಿದ್ದ 1.68 ಲಕ್ಷ ಪ್ರಕರಣಗಳಿಗಿಂತ ಶೇಕಡಾ 15.8 ಹೆಚ್ಚಾಗಿದೆ. ಇಲ್ಲಿಯವರೆಗೆ 4,868 ಓಮಿಕ್ರಾನ್ ಸೋಂಕಿನ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 1,281,ರಾಜಸ್ಥಾನದಲ್ಲಿ 645 ಓಮಿಕ್ರಾನ್ ಸೋಂಕಿತರಿದ್ದಾರೆ.

ರಾಜ್ಯದಲ್ಲಿಯೂ ಕೊರೋನಾ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನ 14,473 ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 10,800 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 10.30% ಇದೆ.


ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...