Homeಕೊರೊನಾ5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್‌ ಡೋಸ್ ಅದನ್ನು ತಡೆಯದು ಎಂದ...

5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್‌ ಡೋಸ್ ಅದನ್ನು ತಡೆಯದು ಎಂದ ತಜ್ಞರು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,94,720 ಕೊರೊನಾ ಪ್ರಕರಣಗಳು, ರಾಜ್ಯದಲ್ಲಿ 14,473 ಹೊಸ ಕೇಸಸ್ ವರದಿಯಾಗಿವೆ.

- Advertisement -
- Advertisement -

ಕೋವಿಡ್‌ನ ಓಮಿಕ್ರಾನ್ ರೂಪಾಂತರ ಸೋಂಕನ್ನು ತಡೆಯಲಾಗದು. ಪ್ರತಿಯೊಬ್ಬರೂ ಅಂತಿಮವಾಗಿ ಸೋಂಕಿಗೆ ಒಳಗಾಗುತ್ತಾರೆ. ಬೂಸ್ಟರ್ ಲಸಿಕೆ ಡೋಸ್‌ಗಳು ವೈರಸ್‌ನ ವೇಗದ ಹರಡುವಿಕೆಯನ್ನು ತಡೆಯುವುದಿಲ್ಲ ಎಂದು ಉನ್ನತ ಸರ್ಕಾರಿ ತಜ್ಞರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಬೂಸ್ಟರ್‌ ಡೋಸ್ ನೀಡಿದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ಸೋಂಕು ಸಂಭವಿಸುತ್ತದೆ. ಪ್ರಪಂಚದಾದ್ಯಂತ ಇದು ಸಂಭವಿಸಿದೆ. ಕೊರೊನಾ ಇನ್ನು ಮುಂದೆ ಭಯಾನಕ ರೋಗವಲ್ಲ. ಕೋವಿಡ್‌ನ ಈ ಹೊಸ ರೂಪಾಂತರ ಸೌಮ್ಯವಾಗಿದ್ದು, ಸೋಂಕಿತರು ಆಸ್ಪತ್ರೆಗೆ ಸೇರಬೇಕಾಗಿಲ್ಲ. ಕಡಿಮೆ ಸಂಖ್ಯೆಯಲ್ಲಿ ಆಸ್ಪತ್ರೆಗೆ ಸೇರುವ ಅನಿವಾರ್ಯತೆ ಇರುತ್ತದೆ. ಇದು ನಾವು ನಿಭಾಯಿಸಬಹುದಾದ ಕಾಯಿಲೆಯಾಗಿದೆ” ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆಯ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಜೈಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ.

“ಇತರ ದೇಶಗಳಂತೆ ಭಾರತಕ್ಕೆ ಈ ವೈರಸ್ ಕೆಟ್ಟದಾಗಿ ಪರಿಣಾಮ ಬೀರಿಲ್ಲ. ದೇಶದಲ್ಲಿ ಕೊರೊನಾ ಲಸಿಕೆಗಳನ್ನು ಪರಿಚಯಿಸುವ ಮೊದಲೇ ದೇಶದ ಶೇಕಡಾ 85 ರಷ್ಟು ಜನರು ಸೋಂಕಿಗೆ ಒಳಗಾಗಿದ್ದರು. ಆದ್ದರಿಂದ, ಮೊದಲ ಡೋಸ್ ಮೂಲಭೂತವಾಗಿಯೇ ಒಂದು ಬೂಸ್ಟರ್ ಡೋಸ್” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

“ನಮ್ಮಲ್ಲಿ ಬಹುಪಾಲು ಜನರಿಗೆ ನಾವು ಸೋಂಕಿಗೆ ಒಳಗಾಗಿದ್ದೇವೆ ಎಂದು ತಿಳಿದಿರುವುದಿಲ್ಲ, ಬಹುಶಃ 80% ಕ್ಕಿಂತ ಹೆಚ್ಚು ಜನರು ಸೋಂಕಿತರಾಗಿದ್ದರೂ ಸಹ ತಿಳಿದಿರುವುದಿಲ್ಲ” ಎಂದು ಹೇಳಿದ್ದಾರೆ.

“ನಾವು ಇಲ್ಲಿಯವರೆಗೆ ಸರ್ಕಾರದ ಯಾವುದೇ ಸಂಸ್ಥೆಗಳಿಂದ ಬೂಸ್ಟರ್ ಡೋಸ್ ಅನ್ನು ಸೂಚಿಸಿಲ್ಲ. ಮುನ್ನೆಚ್ಚರಿಕೆ ಡೋಸ್ ಅನ್ನು ಸೂಚಿಸಲಾಗಿದೆ, ಏಕೆಂದರೆ ಕೆಲವು ಜನರು ಅದರಲ್ಲೂ ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರು, ಎರಡನೇ ಡೋಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂಬ ವರದಿಗಳಿವೆ” ಎಂದಿದ್ದಾರೆ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಜೈಪ್ರಕಾಶ್ ಮುಳಿಯಿಲ್.

ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು 2 ಲಕ್ಷ ಗಡಿಯತ್ತ ಇದ್ದು, ಕಳೆದ 24 ಗಂಟೆಗಳಲ್ಲಿ 1,94,720 ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಂಗಳವಾರ ವರದಿಯಾಗಿದ್ದ 1.68 ಲಕ್ಷ ಪ್ರಕರಣಗಳಿಗಿಂತ ಶೇಕಡಾ 15.8 ಹೆಚ್ಚಾಗಿದೆ. ಇಲ್ಲಿಯವರೆಗೆ 4,868 ಓಮಿಕ್ರಾನ್ ಸೋಂಕಿನ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 1,281,ರಾಜಸ್ಥಾನದಲ್ಲಿ 645 ಓಮಿಕ್ರಾನ್ ಸೋಂಕಿತರಿದ್ದಾರೆ.

ರಾಜ್ಯದಲ್ಲಿಯೂ ಕೊರೋನಾ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನ 14,473 ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 10,800 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 10.30% ಇದೆ.


ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...