Homeಕೊರೊನಾಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಈ ವಾರದ ಆರಂಭದಲ್ಲಿ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು ಮತ್ತು ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳನ್ನು ಸೂಚಿಸಿದೆ.

“ಈ ಕೊರೊನಾ ರೂಪಾಂತರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು, ವ್ಯಾಕ್ಸಿನೇಷನ್ ಹೆಚ್ಚಳ ಮತ್ತು ಕೋವಿಡ್-ಸೂಕ್ತ ಮಾರ್ಗಸೂಚಿಗಳನ್ನು ಪೂರ್ವಭಾವಿ ಕ್ರಮದಲ್ಲಿ ಜಾರಿಗೊಳಿಸುವುದು ಅತ್ಯಗತ್ಯ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಹಿಂದಿನ ಪ್ರಯಾಣದ ವಿವರಗಳನ್ನು ಪಡೆದು ವರದಿ ಮಾಡುವ ಕಾರ್ಯವಿಧಾನವಿದ್ದು, ಇದನ್ನು ನಿಮ್ಮ ಮಟ್ಟದಲ್ಲಿ ಮತ್ತೆ ಪರಿಶೀಲಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

“ಈ ರೂಪಾಂತರಿತ ವೈರಸ್‌ನಿಂದ ಉಂಟಾಗುವ ಉಲ್ಬಣವನ್ನು ನಿಭಾಯಿಸಲು ಸಾಕಷ್ಟು ಪರೀಕ್ಷಾ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಬೇಕಾಗಿದೆ. ಕೆಲವು ರಾಜ್ಯಗಳಲ್ಲಿ ಒಟ್ಟಾರೆ ಪರೀಕ್ಷೆ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕುಸಿದಿದ್ದು, ಇದರಿಂದ ಸೋಂಕಿನ ಹರಡುವಿಕೆಯ ನಿಜವಾದ ಮಟ್ಟವನ್ನು ನಿರ್ಧರಿಸಲು ಕಷ್ಟ” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿಗೆ ಪಾಸಿಟಿವ್ ಪ್ರಕರಣಗಳು ಕಂಡುಬಂದ ಪ್ರದೇಶಗಳ ನಿರಂತರ ಮೇಲ್ವಿಚಾರಣೆಯನ್ನು ಮಾಡಬೇಕು. ಹಾಟ್‌ಸ್ಪಾಟ್‌ಗಳಲ್ಲಿ ಸ್ಯಾಚುರೇಶನ್ ಪರೀಕ್ಷೆಯ ಅಗತ್ಯವಿದೆ. ಜೊತೆಗೆ ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಎಲ್ಲಾ ಪಾಸಿಟಿವ್ ಬಂದ ವ್ಯಕ್ತಿಗಳ ಮಾದರಿಗಳನ್ನು ಗೊತ್ತುಪಡಿಸಿದ ಲ್ಯಾಬ್‌ಗಳಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

“ದೇಶದಲ್ಲಿ ಈ ರೂಪಾಂತರಿ ಕುರಿತು ಸಾಮಾನ್ಯವಾಗಿ ತಪ್ಪು ಮಾಹಿತಿಗಳು ಜನರಿಗೆ ತಲುಪುತ್ತಿರುತ್ತವೆ. ಇದು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗುತ್ತದೆ. ಇದನ್ನು ಪರಿಹರಿಸಲು, ಎಲ್ಲಾ ರಾಜ್ಯಗಳು ಪೂರ್ವಭಾವಿಯಾಗಿ ಮತ್ತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳು, ರಾಜ್ಯ ಬುಲೆಟಿನ್ಗಳ ಮೂಲಕ ಜನರ ಕಳವಳಗಳನ್ನು ಪರಿಹರಿಸಬೇಕು” ಎಂದು ಹೇಳಲಾಗಿದೆ.

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...