Homeಕೊರೊನಾಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಈ ವಾರದ ಆರಂಭದಲ್ಲಿ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು ಮತ್ತು ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳನ್ನು ಸೂಚಿಸಿದೆ.

“ಈ ಕೊರೊನಾ ರೂಪಾಂತರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು, ವ್ಯಾಕ್ಸಿನೇಷನ್ ಹೆಚ್ಚಳ ಮತ್ತು ಕೋವಿಡ್-ಸೂಕ್ತ ಮಾರ್ಗಸೂಚಿಗಳನ್ನು ಪೂರ್ವಭಾವಿ ಕ್ರಮದಲ್ಲಿ ಜಾರಿಗೊಳಿಸುವುದು ಅತ್ಯಗತ್ಯ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಹಿಂದಿನ ಪ್ರಯಾಣದ ವಿವರಗಳನ್ನು ಪಡೆದು ವರದಿ ಮಾಡುವ ಕಾರ್ಯವಿಧಾನವಿದ್ದು, ಇದನ್ನು ನಿಮ್ಮ ಮಟ್ಟದಲ್ಲಿ ಮತ್ತೆ ಪರಿಶೀಲಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

“ಈ ರೂಪಾಂತರಿತ ವೈರಸ್‌ನಿಂದ ಉಂಟಾಗುವ ಉಲ್ಬಣವನ್ನು ನಿಭಾಯಿಸಲು ಸಾಕಷ್ಟು ಪರೀಕ್ಷಾ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಬೇಕಾಗಿದೆ. ಕೆಲವು ರಾಜ್ಯಗಳಲ್ಲಿ ಒಟ್ಟಾರೆ ಪರೀಕ್ಷೆ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕುಸಿದಿದ್ದು, ಇದರಿಂದ ಸೋಂಕಿನ ಹರಡುವಿಕೆಯ ನಿಜವಾದ ಮಟ್ಟವನ್ನು ನಿರ್ಧರಿಸಲು ಕಷ್ಟ” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿಗೆ ಪಾಸಿಟಿವ್ ಪ್ರಕರಣಗಳು ಕಂಡುಬಂದ ಪ್ರದೇಶಗಳ ನಿರಂತರ ಮೇಲ್ವಿಚಾರಣೆಯನ್ನು ಮಾಡಬೇಕು. ಹಾಟ್‌ಸ್ಪಾಟ್‌ಗಳಲ್ಲಿ ಸ್ಯಾಚುರೇಶನ್ ಪರೀಕ್ಷೆಯ ಅಗತ್ಯವಿದೆ. ಜೊತೆಗೆ ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಎಲ್ಲಾ ಪಾಸಿಟಿವ್ ಬಂದ ವ್ಯಕ್ತಿಗಳ ಮಾದರಿಗಳನ್ನು ಗೊತ್ತುಪಡಿಸಿದ ಲ್ಯಾಬ್‌ಗಳಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

“ದೇಶದಲ್ಲಿ ಈ ರೂಪಾಂತರಿ ಕುರಿತು ಸಾಮಾನ್ಯವಾಗಿ ತಪ್ಪು ಮಾಹಿತಿಗಳು ಜನರಿಗೆ ತಲುಪುತ್ತಿರುತ್ತವೆ. ಇದು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗುತ್ತದೆ. ಇದನ್ನು ಪರಿಹರಿಸಲು, ಎಲ್ಲಾ ರಾಜ್ಯಗಳು ಪೂರ್ವಭಾವಿಯಾಗಿ ಮತ್ತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳು, ರಾಜ್ಯ ಬುಲೆಟಿನ್ಗಳ ಮೂಲಕ ಜನರ ಕಳವಳಗಳನ್ನು ಪರಿಹರಿಸಬೇಕು” ಎಂದು ಹೇಳಲಾಗಿದೆ.

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...