Homeಕೊರೊನಾಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಈ ವಾರದ ಆರಂಭದಲ್ಲಿ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು ಮತ್ತು ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳನ್ನು ಸೂಚಿಸಿದೆ.

“ಈ ಕೊರೊನಾ ರೂಪಾಂತರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು, ವ್ಯಾಕ್ಸಿನೇಷನ್ ಹೆಚ್ಚಳ ಮತ್ತು ಕೋವಿಡ್-ಸೂಕ್ತ ಮಾರ್ಗಸೂಚಿಗಳನ್ನು ಪೂರ್ವಭಾವಿ ಕ್ರಮದಲ್ಲಿ ಜಾರಿಗೊಳಿಸುವುದು ಅತ್ಯಗತ್ಯ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಹಿಂದಿನ ಪ್ರಯಾಣದ ವಿವರಗಳನ್ನು ಪಡೆದು ವರದಿ ಮಾಡುವ ಕಾರ್ಯವಿಧಾನವಿದ್ದು, ಇದನ್ನು ನಿಮ್ಮ ಮಟ್ಟದಲ್ಲಿ ಮತ್ತೆ ಪರಿಶೀಲಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

“ಈ ರೂಪಾಂತರಿತ ವೈರಸ್‌ನಿಂದ ಉಂಟಾಗುವ ಉಲ್ಬಣವನ್ನು ನಿಭಾಯಿಸಲು ಸಾಕಷ್ಟು ಪರೀಕ್ಷಾ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಬೇಕಾಗಿದೆ. ಕೆಲವು ರಾಜ್ಯಗಳಲ್ಲಿ ಒಟ್ಟಾರೆ ಪರೀಕ್ಷೆ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕುಸಿದಿದ್ದು, ಇದರಿಂದ ಸೋಂಕಿನ ಹರಡುವಿಕೆಯ ನಿಜವಾದ ಮಟ್ಟವನ್ನು ನಿರ್ಧರಿಸಲು ಕಷ್ಟ” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿಗೆ ಪಾಸಿಟಿವ್ ಪ್ರಕರಣಗಳು ಕಂಡುಬಂದ ಪ್ರದೇಶಗಳ ನಿರಂತರ ಮೇಲ್ವಿಚಾರಣೆಯನ್ನು ಮಾಡಬೇಕು. ಹಾಟ್‌ಸ್ಪಾಟ್‌ಗಳಲ್ಲಿ ಸ್ಯಾಚುರೇಶನ್ ಪರೀಕ್ಷೆಯ ಅಗತ್ಯವಿದೆ. ಜೊತೆಗೆ ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಎಲ್ಲಾ ಪಾಸಿಟಿವ್ ಬಂದ ವ್ಯಕ್ತಿಗಳ ಮಾದರಿಗಳನ್ನು ಗೊತ್ತುಪಡಿಸಿದ ಲ್ಯಾಬ್‌ಗಳಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

“ದೇಶದಲ್ಲಿ ಈ ರೂಪಾಂತರಿ ಕುರಿತು ಸಾಮಾನ್ಯವಾಗಿ ತಪ್ಪು ಮಾಹಿತಿಗಳು ಜನರಿಗೆ ತಲುಪುತ್ತಿರುತ್ತವೆ. ಇದು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗುತ್ತದೆ. ಇದನ್ನು ಪರಿಹರಿಸಲು, ಎಲ್ಲಾ ರಾಜ್ಯಗಳು ಪೂರ್ವಭಾವಿಯಾಗಿ ಮತ್ತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳು, ರಾಜ್ಯ ಬುಲೆಟಿನ್ಗಳ ಮೂಲಕ ಜನರ ಕಳವಳಗಳನ್ನು ಪರಿಹರಿಸಬೇಕು” ಎಂದು ಹೇಳಲಾಗಿದೆ.

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...