Homeಕೊರೊನಾಓಮಿಕ್ರಾನ್ ಆತಂಕ: ಪಿಎಂ ಸಾಹೇಬ್, ದಯವಿಟ್ಟು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸಿ- ಕೇಜ್ರಿವಾಲ್ ಮನವಿ

ಓಮಿಕ್ರಾನ್ ಆತಂಕ: ಪಿಎಂ ಸಾಹೇಬ್, ದಯವಿಟ್ಟು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸಿ- ಕೇಜ್ರಿವಾಲ್ ಮನವಿ

- Advertisement -
- Advertisement -

ಸುಮಾರು 13 ದೇಶಗಳಲ್ಲಿ ಕಂಡು ಬಂದಿರುವ ಓಮಿಕ್ರಾನ್ ಆತಂಕದಿಂದಾಗಿ ಹಲವು ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸುತ್ತಿದ್ದು, ದೇಶದಲ್ಲಿಯೂ ಅಂತರರಾಷ್ಟ್ರೀಯ ವಿಮಾನಯಾನವನ್ನು ನಿರ್ಬಂಧಿಸಬೇಕು ಎನ್ನುವ ಒತ್ತಾಯ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಿಎಂ ಸಾಹೇಬ್ ದಯವಿಟ್ಟು ತಕ್ಷಣವೇ ಅಂತರರಾಷ್ಟ್ರೀಯ ವಿಮಾನಯಾನವನ್ನು ನಿರ್ಬಂಧಿಸಿ, ಅಂತರರಾಷ್ಟರೀಯ ವಿಮಾನಯಾನದಿಂದ ಮೊದಲು ಅಪಾಯಕ್ಕೆ ಒಳಗಾಗುವುದು ದೆಹಲಿ ಎಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಕನಿಷ್ಠ 13 ದೇಶಗಳಲ್ಲಿ ‘ಓಮಿಕ್ರಾನ್’ ಹೊಸ ರೂಪಾಂತರವು ಕಂಡುಬಂದಿದೆ. ಈ ಹೊಸ ರೂಪಾಂತರವು ಅತ್ಯಂತ ಹೆಚ್ಚಿನ ಜಾಗತಿಕ ಅಪಾಯವನ್ನು ಉಂಟುಮಾಡುತ್ತದೆ. ಜೊತೆಗೆ ತೀವ್ರ ಪರಿಣಾಮಗಳನ್ನು ಉಂಟುಮಾಡಬಹುದು” ಎಂದು ಸೋಮವಾರದ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಸೌತ್ ಆಫ್ರಿಕಾದಿಂದ ಬಂದ ವ್ಯಕ್ತಿಗೆ ಸೋಂಕು, 3 ದೇಶಗಳಿಂದ ವಿಮಾನಯಾನ ಬಂದ್ ಮಾಡಲು ಸಿಎಂ ಬೊಮ್ಮಾಯಿ ಮನವಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತುರ್ತು ಮನವಿ ಮಾಡಿರುವ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. “ಹಲವು ದೇಶಗಳು ಓಮಿಕ್ರಾನ್ ಪೀಡಿತ ರಾಷ್ಟ್ರಗಳಿಂದ ವಿಮಾನಗಳನ್ನು ನಿರ್ಬಂಧಿಸಿವೆ. ನಾವು ಏಕೆ ಇನ್ನು ವಿಳಂಬ ಮಾಡುತ್ತಿದ್ದೇವೆ?. ಮೊದಲ ಅಲೆಯಲ್ಲೂ ನಾವು ವಿಮಾನಗಳ ಮೇಲೆ ನಿಷೇಧ ಹೇರುವುದನ್ನು ವಿಳಂಬಗೊಳಿಸಿದ್ದೇವೆ. ಹೆಚ್ಚಿನ ಅಂತರಾಷ್ಟ್ರೀಯ ವಿಮಾನಗಳು ದೆಹಲಿಗೆ ಬಂದಿಳಿಯುತ್ತವೆ. ಇದರಿಂದ ದೆಹಲಿ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಪಿಎಂ ಸಾಹೇಬ್, ದಯವಿಟ್ಟು ವಿಮಾನಗಳನ್ನು ನಿಲ್ಲಿಸಿ” ಎಂದು ಮನವಿ ಮಾಡಿದ್ದಾರೆ.

ಈ ಹಿಂದೆಯೂ ಕೂ ಅರವಿಂದ್ ಕೇಜ್ರಿವಾಲ್ ಪ್ರಧಾನಿಅವರಿಗೆ ಪತ್ರ ಬರೆದು ಓಮಿಕ್ರಾನ್ ಪೀಡಿತ ದೇಶಗಳಿಂದ ತಕ್ಷಣವೇ ವಿಮಾನಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದರು. “ಯಾವುದೇ ವಿಳಂಬವು ದೇಶಕ್ಕೆ ತುಂಬಾ ಹಾನಿಕಾರಕವಾಗಿದೆ” ಎಂದು ಹೇಳಿದ್ದರು.

ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರವು ಕೂಡ ಹೊಸ ರೂಪಾಂತರ ಕಂಡುಬಂದಿರುವ 13 ದೇಶಗಳಿಂದ ವಿಮಾನಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ರಾಷ್ಟ್ರಗಳಿಂದ ವಿಮಾನಗಳನ್ನು ನಿರ್ಬಂಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....