Homeಕೊರೊನಾಓಮಿಕ್ರಾನ್ ಆತಂಕ: ಪಿಎಂ ಸಾಹೇಬ್, ದಯವಿಟ್ಟು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸಿ- ಕೇಜ್ರಿವಾಲ್ ಮನವಿ

ಓಮಿಕ್ರಾನ್ ಆತಂಕ: ಪಿಎಂ ಸಾಹೇಬ್, ದಯವಿಟ್ಟು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸಿ- ಕೇಜ್ರಿವಾಲ್ ಮನವಿ

- Advertisement -
- Advertisement -

ಸುಮಾರು 13 ದೇಶಗಳಲ್ಲಿ ಕಂಡು ಬಂದಿರುವ ಓಮಿಕ್ರಾನ್ ಆತಂಕದಿಂದಾಗಿ ಹಲವು ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸುತ್ತಿದ್ದು, ದೇಶದಲ್ಲಿಯೂ ಅಂತರರಾಷ್ಟ್ರೀಯ ವಿಮಾನಯಾನವನ್ನು ನಿರ್ಬಂಧಿಸಬೇಕು ಎನ್ನುವ ಒತ್ತಾಯ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಿಎಂ ಸಾಹೇಬ್ ದಯವಿಟ್ಟು ತಕ್ಷಣವೇ ಅಂತರರಾಷ್ಟ್ರೀಯ ವಿಮಾನಯಾನವನ್ನು ನಿರ್ಬಂಧಿಸಿ, ಅಂತರರಾಷ್ಟರೀಯ ವಿಮಾನಯಾನದಿಂದ ಮೊದಲು ಅಪಾಯಕ್ಕೆ ಒಳಗಾಗುವುದು ದೆಹಲಿ ಎಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಕನಿಷ್ಠ 13 ದೇಶಗಳಲ್ಲಿ ‘ಓಮಿಕ್ರಾನ್’ ಹೊಸ ರೂಪಾಂತರವು ಕಂಡುಬಂದಿದೆ. ಈ ಹೊಸ ರೂಪಾಂತರವು ಅತ್ಯಂತ ಹೆಚ್ಚಿನ ಜಾಗತಿಕ ಅಪಾಯವನ್ನು ಉಂಟುಮಾಡುತ್ತದೆ. ಜೊತೆಗೆ ತೀವ್ರ ಪರಿಣಾಮಗಳನ್ನು ಉಂಟುಮಾಡಬಹುದು” ಎಂದು ಸೋಮವಾರದ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಸೌತ್ ಆಫ್ರಿಕಾದಿಂದ ಬಂದ ವ್ಯಕ್ತಿಗೆ ಸೋಂಕು, 3 ದೇಶಗಳಿಂದ ವಿಮಾನಯಾನ ಬಂದ್ ಮಾಡಲು ಸಿಎಂ ಬೊಮ್ಮಾಯಿ ಮನವಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತುರ್ತು ಮನವಿ ಮಾಡಿರುವ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. “ಹಲವು ದೇಶಗಳು ಓಮಿಕ್ರಾನ್ ಪೀಡಿತ ರಾಷ್ಟ್ರಗಳಿಂದ ವಿಮಾನಗಳನ್ನು ನಿರ್ಬಂಧಿಸಿವೆ. ನಾವು ಏಕೆ ಇನ್ನು ವಿಳಂಬ ಮಾಡುತ್ತಿದ್ದೇವೆ?. ಮೊದಲ ಅಲೆಯಲ್ಲೂ ನಾವು ವಿಮಾನಗಳ ಮೇಲೆ ನಿಷೇಧ ಹೇರುವುದನ್ನು ವಿಳಂಬಗೊಳಿಸಿದ್ದೇವೆ. ಹೆಚ್ಚಿನ ಅಂತರಾಷ್ಟ್ರೀಯ ವಿಮಾನಗಳು ದೆಹಲಿಗೆ ಬಂದಿಳಿಯುತ್ತವೆ. ಇದರಿಂದ ದೆಹಲಿ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಪಿಎಂ ಸಾಹೇಬ್, ದಯವಿಟ್ಟು ವಿಮಾನಗಳನ್ನು ನಿಲ್ಲಿಸಿ” ಎಂದು ಮನವಿ ಮಾಡಿದ್ದಾರೆ.

ಈ ಹಿಂದೆಯೂ ಕೂ ಅರವಿಂದ್ ಕೇಜ್ರಿವಾಲ್ ಪ್ರಧಾನಿಅವರಿಗೆ ಪತ್ರ ಬರೆದು ಓಮಿಕ್ರಾನ್ ಪೀಡಿತ ದೇಶಗಳಿಂದ ತಕ್ಷಣವೇ ವಿಮಾನಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದರು. “ಯಾವುದೇ ವಿಳಂಬವು ದೇಶಕ್ಕೆ ತುಂಬಾ ಹಾನಿಕಾರಕವಾಗಿದೆ” ಎಂದು ಹೇಳಿದ್ದರು.

ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರವು ಕೂಡ ಹೊಸ ರೂಪಾಂತರ ಕಂಡುಬಂದಿರುವ 13 ದೇಶಗಳಿಂದ ವಿಮಾನಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ರಾಷ್ಟ್ರಗಳಿಂದ ವಿಮಾನಗಳನ್ನು ನಿರ್ಬಂಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....