Homeಕರ್ನಾಟಕರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

- Advertisement -
- Advertisement -

ವಿಶ್ವದಲ್ಲಿ ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್‌ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

“ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್ ಟಿ ಸಿಪಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್ ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

“ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಧಾರವಾಡ , ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್ ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. SDM ಕಾಲೇಜನ ವೈದ್ಯರು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ” ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ 80 ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ 70% ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...