Homeಕರ್ನಾಟಕರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

- Advertisement -
- Advertisement -

ವಿಶ್ವದಲ್ಲಿ ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್‌ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

“ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್ ಟಿ ಸಿಪಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್ ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

“ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಧಾರವಾಡ , ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್ ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. SDM ಕಾಲೇಜನ ವೈದ್ಯರು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ” ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ 80 ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ 70% ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...