Homeಮುಖಪುಟದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

ದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

- Advertisement -
- Advertisement -

ತಮಿಳು ಚಿತ್ರರಂಗದ ಪ್ರಸಿದ್ಧ ನಟ ದಳಪತಿ ವಿಜಯ್ ಇಂದು ತಮ್ಮ 47 ನೇ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ಹುಟ್ಟಿದ ದಿನದಂದು ಅವರ ಮುಂದಿನ ಚಲನಚಿತ್ರ ಬೀಸ್ಟ್‌ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ವಿಜಯ್ ಹುಟ್ಟಿದ ದಿನದಂದು ಅವರ ಅಭಿಮಾನಿಗಳು ಮತ್ತು ಭಾರತ ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಧನುಷ್, ಕಾಜೊಲ್ ಅಗರವಾಲ್ ಸೇರಿದಂತೆ ತಮಿಳು ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಉತ್ತಮ ಆರೋಗ್ಯ ಮತ್ತು ಯಶಸ್ಸು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟ ಮೋಹನ್‌ ಲಾಲ್ ಕೂಡ ದಳಪತಿ ವಿಜಯ್ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ವಿಜಯ್ ಹಿಂದೆ ಮರ್ಸೆಲ್ ಚಿತ್ರದಲ್ಲಿ ಕೇಂದ್ರ ಸರ್ಕಾರದ ನೋಟು ರದ್ಧತಿ, ಜಿಎಸ್‌ಟಿ ಸೇರಿ ಹಲವು ಯೋಜನೆಗಳ ಕುರಿತು ಟೀಕೆ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಹಾಗೆಯೇ ತಮಿಳು ನಾಡು ಚುನಾವಣೆ ಸಮಯದಲ್ಲಿ ಸೈಕಲ್‌ ಮೂಲಕ ಮತ ಚಲಾಯಿಸಲು ತೆರಳಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತುವುದರ ಜೊತೆಗೆ ಪರಿಸರ ರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸಿದ್ದರು. ನಟೆನೆಯ ಜೊತೆಗೆ ವಿವಿಧ ಸಾಮಾಜಿಕ ಕಳಕಳಿಯ ಚಟುವಟಿಕೆಯಲ್ಲಿಯೂ ದಳಪತಿ ವಿಜಯ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಜಯ್ ಹಲವು ಸಂದರ್ಭಗಳಲ್ಲಿ ಬಹಿರಂಗವಾಗಿ ಸರ್ಕಾರದ ವಿರುದ್ಧ ತಮ್ಮ ಧ್ವನಿಯನ್ನು ಎತ್ತುತ್ತಲೇ ಬಂದಿದ್ದಾರೆ.

ಸದ್ಯ ವಿಜಯ ಸೇತುಪತಿ ಅವರೊಂದಿಗಿನ ತಮ್ಮ ಹಿಂದಿನ ಚಿತ್ರ ಮಾಸ್ಟರ್ ಚಿತ್ರದ ಯಶಸ್ಸಿನಲ್ಲಿರುವ ವಿಜಯ ದಳಪತಿ ಮುಂದಿನ ಚಿತ್ರ ಬೀಸ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬೀಸ್ಟ್‌ ಚಿತ್ರದಲ್ಲಿ ದಳಪತಿ ವಿಜಯ್‌ ಜೊತೆಗೆ ಪೂಜಾ ಹೆಗ್ಡೆ ಕೂಡ ನಟಿಸುತ್ತದ್ದಾರೆ.

 

ನಿನ್ನೆ ಮಧ್ಯರಾತ್ರಿ 2 ಗಂಟೆಗೆ ಬಿಡುಗಡೆಯಾದ ದಳಪತಿ ವಿಜಯ್ ಅವರ ಬೀಸ್ಟ್‌ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದ್ದು ಅಭಿಮಾನಿಗಳು ವಿಜಯ್ ಅವರ ಹೊಸ ಲುಕ್‌ಗೆ ಫಿದಾ ಆಗಿದ್ದಾರೆ.


ಇದನ್ನೂ ಓದಿ : ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...