Homeಮುಖಪುಟದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

ದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

- Advertisement -
- Advertisement -

ತಮಿಳು ಚಿತ್ರರಂಗದ ಪ್ರಸಿದ್ಧ ನಟ ದಳಪತಿ ವಿಜಯ್ ಇಂದು ತಮ್ಮ 47 ನೇ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ಹುಟ್ಟಿದ ದಿನದಂದು ಅವರ ಮುಂದಿನ ಚಲನಚಿತ್ರ ಬೀಸ್ಟ್‌ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ವಿಜಯ್ ಹುಟ್ಟಿದ ದಿನದಂದು ಅವರ ಅಭಿಮಾನಿಗಳು ಮತ್ತು ಭಾರತ ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಧನುಷ್, ಕಾಜೊಲ್ ಅಗರವಾಲ್ ಸೇರಿದಂತೆ ತಮಿಳು ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಉತ್ತಮ ಆರೋಗ್ಯ ಮತ್ತು ಯಶಸ್ಸು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟ ಮೋಹನ್‌ ಲಾಲ್ ಕೂಡ ದಳಪತಿ ವಿಜಯ್ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ವಿಜಯ್ ಹಿಂದೆ ಮರ್ಸೆಲ್ ಚಿತ್ರದಲ್ಲಿ ಕೇಂದ್ರ ಸರ್ಕಾರದ ನೋಟು ರದ್ಧತಿ, ಜಿಎಸ್‌ಟಿ ಸೇರಿ ಹಲವು ಯೋಜನೆಗಳ ಕುರಿತು ಟೀಕೆ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಹಾಗೆಯೇ ತಮಿಳು ನಾಡು ಚುನಾವಣೆ ಸಮಯದಲ್ಲಿ ಸೈಕಲ್‌ ಮೂಲಕ ಮತ ಚಲಾಯಿಸಲು ತೆರಳಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತುವುದರ ಜೊತೆಗೆ ಪರಿಸರ ರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸಿದ್ದರು. ನಟೆನೆಯ ಜೊತೆಗೆ ವಿವಿಧ ಸಾಮಾಜಿಕ ಕಳಕಳಿಯ ಚಟುವಟಿಕೆಯಲ್ಲಿಯೂ ದಳಪತಿ ವಿಜಯ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಜಯ್ ಹಲವು ಸಂದರ್ಭಗಳಲ್ಲಿ ಬಹಿರಂಗವಾಗಿ ಸರ್ಕಾರದ ವಿರುದ್ಧ ತಮ್ಮ ಧ್ವನಿಯನ್ನು ಎತ್ತುತ್ತಲೇ ಬಂದಿದ್ದಾರೆ.

ಸದ್ಯ ವಿಜಯ ಸೇತುಪತಿ ಅವರೊಂದಿಗಿನ ತಮ್ಮ ಹಿಂದಿನ ಚಿತ್ರ ಮಾಸ್ಟರ್ ಚಿತ್ರದ ಯಶಸ್ಸಿನಲ್ಲಿರುವ ವಿಜಯ ದಳಪತಿ ಮುಂದಿನ ಚಿತ್ರ ಬೀಸ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬೀಸ್ಟ್‌ ಚಿತ್ರದಲ್ಲಿ ದಳಪತಿ ವಿಜಯ್‌ ಜೊತೆಗೆ ಪೂಜಾ ಹೆಗ್ಡೆ ಕೂಡ ನಟಿಸುತ್ತದ್ದಾರೆ.

 

ನಿನ್ನೆ ಮಧ್ಯರಾತ್ರಿ 2 ಗಂಟೆಗೆ ಬಿಡುಗಡೆಯಾದ ದಳಪತಿ ವಿಜಯ್ ಅವರ ಬೀಸ್ಟ್‌ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದ್ದು ಅಭಿಮಾನಿಗಳು ವಿಜಯ್ ಅವರ ಹೊಸ ಲುಕ್‌ಗೆ ಫಿದಾ ಆಗಿದ್ದಾರೆ.


ಇದನ್ನೂ ಓದಿ : ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...