Homeಮುಖಪುಟದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

ದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

- Advertisement -
- Advertisement -

ತಮಿಳು ಚಿತ್ರರಂಗದ ಪ್ರಸಿದ್ಧ ನಟ ದಳಪತಿ ವಿಜಯ್ ಇಂದು ತಮ್ಮ 47 ನೇ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ಹುಟ್ಟಿದ ದಿನದಂದು ಅವರ ಮುಂದಿನ ಚಲನಚಿತ್ರ ಬೀಸ್ಟ್‌ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ವಿಜಯ್ ಹುಟ್ಟಿದ ದಿನದಂದು ಅವರ ಅಭಿಮಾನಿಗಳು ಮತ್ತು ಭಾರತ ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಧನುಷ್, ಕಾಜೊಲ್ ಅಗರವಾಲ್ ಸೇರಿದಂತೆ ತಮಿಳು ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಉತ್ತಮ ಆರೋಗ್ಯ ಮತ್ತು ಯಶಸ್ಸು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟ ಮೋಹನ್‌ ಲಾಲ್ ಕೂಡ ದಳಪತಿ ವಿಜಯ್ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ವಿಜಯ್ ಹಿಂದೆ ಮರ್ಸೆಲ್ ಚಿತ್ರದಲ್ಲಿ ಕೇಂದ್ರ ಸರ್ಕಾರದ ನೋಟು ರದ್ಧತಿ, ಜಿಎಸ್‌ಟಿ ಸೇರಿ ಹಲವು ಯೋಜನೆಗಳ ಕುರಿತು ಟೀಕೆ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಹಾಗೆಯೇ ತಮಿಳು ನಾಡು ಚುನಾವಣೆ ಸಮಯದಲ್ಲಿ ಸೈಕಲ್‌ ಮೂಲಕ ಮತ ಚಲಾಯಿಸಲು ತೆರಳಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತುವುದರ ಜೊತೆಗೆ ಪರಿಸರ ರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸಿದ್ದರು. ನಟೆನೆಯ ಜೊತೆಗೆ ವಿವಿಧ ಸಾಮಾಜಿಕ ಕಳಕಳಿಯ ಚಟುವಟಿಕೆಯಲ್ಲಿಯೂ ದಳಪತಿ ವಿಜಯ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಜಯ್ ಹಲವು ಸಂದರ್ಭಗಳಲ್ಲಿ ಬಹಿರಂಗವಾಗಿ ಸರ್ಕಾರದ ವಿರುದ್ಧ ತಮ್ಮ ಧ್ವನಿಯನ್ನು ಎತ್ತುತ್ತಲೇ ಬಂದಿದ್ದಾರೆ.

ಸದ್ಯ ವಿಜಯ ಸೇತುಪತಿ ಅವರೊಂದಿಗಿನ ತಮ್ಮ ಹಿಂದಿನ ಚಿತ್ರ ಮಾಸ್ಟರ್ ಚಿತ್ರದ ಯಶಸ್ಸಿನಲ್ಲಿರುವ ವಿಜಯ ದಳಪತಿ ಮುಂದಿನ ಚಿತ್ರ ಬೀಸ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬೀಸ್ಟ್‌ ಚಿತ್ರದಲ್ಲಿ ದಳಪತಿ ವಿಜಯ್‌ ಜೊತೆಗೆ ಪೂಜಾ ಹೆಗ್ಡೆ ಕೂಡ ನಟಿಸುತ್ತದ್ದಾರೆ.

 

ನಿನ್ನೆ ಮಧ್ಯರಾತ್ರಿ 2 ಗಂಟೆಗೆ ಬಿಡುಗಡೆಯಾದ ದಳಪತಿ ವಿಜಯ್ ಅವರ ಬೀಸ್ಟ್‌ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದ್ದು ಅಭಿಮಾನಿಗಳು ವಿಜಯ್ ಅವರ ಹೊಸ ಲುಕ್‌ಗೆ ಫಿದಾ ಆಗಿದ್ದಾರೆ.


ಇದನ್ನೂ ಓದಿ : ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...